ಸೋಮವಾರ, ಮಾರ್ಚ್ 5, 2018

ಭಾರತೀಯ ಸಾಮ್ರಾಜ್ಯಗಳು


ಭಾರತೀಯ ಸಾಮ್ರಾಜ್ಯಗಳು:

೧) ಮೌರ್ಯರು :

━━━━━━━━━

ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ.  ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.

* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು  :
ಸುವರ್ಣಗಿರಿ,  ಇಸಿಲ,  ತೊಸಿಲ,  ಸಂಪ.

* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
- ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ,  ಅ.ಸಿದ್ದಾಪುರ,  ಜಿ.ರಾಮೇಶ್ವರ.
- ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ,  ಪಾಲ್ಕಿಗುಂಡು,  ಕೊಪ್ಪಳ.
- ಗುಲ್ಬರ್ಗಾ ಜಿಲ್ಲೆಯ ಸನ್ನತಿ.
- ಬಳ್ಳಾರಿ ಜಿಲ್ಲೆಯ ನಿಟ್ಟೂರು,  ಉದೇಗೊಳ್ಳಂ 

೨)  ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) : 

━━━━━━━━━━━━━━━━━━━━━━━━━━━━━━━━━-
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ,  (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.  
* ಇವರ ರಾಜಧಾನಿ  :  ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ :  ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ  :  ಸಿಮುಖ. 
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ 
* ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.

೩)  ಬನವಾಸಿಯ ಕದಂಬರು (ಕ್ರಿ.ಶ 345 - 540)

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ  :ಮಯೂರವರ್ಮ (ಮಯೂರಶರ್ಮ)  (345-360)
* ಕದಂಬರ ರಾಜಧಾನಿ :  ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ) 
* ಬನವಾಸಿಗೆ ವನವಾಸಿ,  ವೈಜಯಂತಿ,  ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ :  ಸಿಂಹ.

೪)  ತಲಕಾಡಿನ ಗಂಗರು  (ಕ್ರಿ.ಶ 350- 999)

━━━━━━━━━━━━━━━━━━━━━━━━━━━━━━━━━━━━━━━━━
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು. 
* ಈ ಸಂತತಿಯ ಮೊದಲ ದೊರೆ : ದಡಿಗ (350 -400)
* ಇವರ ಮೊದಲ ರಾಜಧಾನಿ :  ಕೋಲಾರ ಬಳಿಯ ಕುವಲಾಲ
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು  :  ತಲವನಪುರ.
* ಇವರ ಮೂರನೇ ರಾಜಧಾನಿ :  ಚೆನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ) 
* ಈ ಸಂತತಿಯ ಅತ್ಯಂತ ಪ್ರಸಿದ್ಧ  ದೊರೆ : ದುರ್ವಿನೀತ (540-600)
* ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು. 

೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ  :  ಜಯಸಿಂಹ 
* ಇವರ ರಾಜಧಾನಿ  : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ) 
* ಈ ಸಂತತಿಯ ಅತ್ಯಂತ ಪ್ರಸಿದ್ಧ  ದೊರೆ :  ಇಮ್ಮಡಿ ಪುಲಕೇಶಿ (609-642) 
* ಇವರ ರಾಜ ಲಾಂಛನ  : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ :  ಚೀನಾದ ಬೌದ್ಧ ಯಾತ್ರಿಕ  ಹ್ಯೂಯನ್ ತ್ಸಾಂಗ್. 

೬) ಮಾನ್ಯಖೇಟದ ರಾಷ್ಟ್ರಕೂಟರು  (ಕ್ರಿ.ಶ 345 - 540) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ :  ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ   ದೊರೆ :ಅಮೋಘವರ್ಷ ನೃಪತುಂಗ (814-878)
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು. 

೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)

━━━━━━━━━━━━━━━━━━━━━━━━━━━━━━━━━━━━━━━━━
* ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು. 

೮) ಕಲ್ಯಾಣಿಯ ಕಲಚೂರಿಗಳು  (ಕ್ರಿ.ಶ 1156 - 1183)

━━━━━━━━━━━━━━━━━━━━━━━━━━━━━━━━━━━━━━━━━
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ  ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು. 
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. 

೯) ದ್ವಾರಸಮುದ್ರದ ಹೊಯ್ಸಳರು  (ಕ್ರಿ.ಶ 985 - 1346) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಮೂಲ ಪುರುಷ  : ಸಳ.
* ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152) 
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

*******************************************ಸಂಗ್ರಹ: ANAND SHIKKERI (Asst Master
*******************************************

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

JNAANASAMPAD

ನಳಂದ ವಿಶ್ವವಿದ್ಯಾಲಯ

ಭಾರತದ ಪುರಾತನ ಕಾಲದ ಜ್ಞಾನದ ಖನಜ  "ನಾಲಂದಾ ವಿಶ್ವವಿದ್ಯಾಲಯ"  ━━━━━━━━━━━━━━━━━━━━━━ —ತಕ್ಷಶಿಲಾ ತರುವಾಯ ಪ್ರಖ್ಯಾತಿಗೆ ಬಂದ ನಾಲಂದಾ ವಿಶ್ವ...

Current post