ಶುಕ್ರವಾರ, ಮಾರ್ಚ್ 9, 2018

ಪ್ರಿಟ್ಜಕರ್ ವಾಸ್ತುಶಿಲ್ಪ ಗೌರವ ಮತ್ತು ಬಾಲಕೃಷ್ಣ ದೋಷಿ


ಭಾರತದ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ಅವರಿಗೆ ನೊಬೆಲ್‌ಗೆ ಸಮಾನವಾದ ‘ಪ್ರಿಟ್ಜಕರ್‌’ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.


60 ವರ್ಷಗಳಿಗಿಂತಲೂ ಹೆಚ್ಚು ಕಾಲ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₹65ಲಕ್ಷ (1ಲಕ್ಷ ಡಾಲರ್‌) ಮೊತ್ತವನ್ನು ಒಳಗೊಂಡಿದೆ.

ಬೆಂಗಳೂರು ಐಐಎಂ, ಅಹಮದಾಬಾದ್‌ನ ‘ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಪ್ಲಾನಿಂಗ್ ಅಂಡ್ ಟೆಕ್ನಾಲಜಿ’ ಸೇರಿದಂತೆ ಹಲವು ಕಟ್ಟಡಗಳಿಗೆ ಬಾಲಕೃಷ್ಣ ವಿನ್ಯಾಸ ಮಾಡಿದ್ದಾರೆ.

ಬಾಲಕೃಷ್ಣ ದೋಷಿ ಜನನ

ಆಗಸ್ಟ್ ೨೬, ೧೯೨೭ ರಂದು ಪುಣೆಯಲ್ಲಿ ಜನಿಸಿದರು.‌
ಅವರ ಶೈಕ್ಷಣಿಕ ವೃತ್ತಿಜೀವನವನ್ನು ಮುಂಬೈನಲ್ಲಿರುವ ಸರ್ ಜೆಜೆ ಕಾಲೇಜ್ ಆಫ್ ಆರ್ಕಿಟೆಕ್ಚರ್ನಲ್ಲಿ ಪ್ರಾರಂಭಿಸಿದರು. ಅವರು 1956 ರಲ್ಲಿ ತಮ್ಮದೇ ಆದ ಅಭ್ಯಾಸ, ವಾಸ್ತುಶಿಲ್ಪವನ್ನು ಸ್ಥಾಪಿಸಿದರು ಮತ್ತು 1960 ರ ದಶಕದಲ್ಲಿ ಅವರ ಸ್ವಂತ ವಿನ್ಯಾಸದ ಶಾಲೆ  ಅಹಮದಾಬಾದ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅನ್ನು ಸ್ಥಾಪಿಸಿದರು (CEPT). 1950 ರ ದಶಕದಲ್ಲಿ ಚಂಡೀಗಢ ಮತ್ತು ಅಹಮದಾಬಾದ್ನಲ್ಲಿ ಆಧುನಿಕತಾವಾದದ ಮಾಸ್ಟರ್ ಆಗಿದ್ದ ಸ್ವಿಸ್-ಫ್ರೆಂಚ್ ವಾಸ್ತುಶಿಲ್ಪಿ ಲೆ ಕೊರ್ಬ್ಯೂಸಿಯರ್ ಅವರು ನಿಕಟವಾಗಿ ಕೆಲಸ ಮಾಡಿದರು.ಈ ಪುರಸ್ಕಾರದ ಸಂದರ್ಭ ನನ್ನ ಗುರು, ಲೆ ಕಾರ್ಬ್ಯುಸಿಯರ್ಗೆ ನಾನು ಈ ಪ್ರತಿಷ್ಠಿತ ಬಹುಮಾನವನ್ನು ಅರ್ಪಿಸಿದ್ದೇನೆ ಎಂದು ದೋಶಿ ತಿಳಿಸಿದ್ದಾರೆ, ಅವರ ಬೋಧನೆಗಳು ನನಗೆ ಗುರುತನ್ನು ಪ್ರಶ್ನಿಸಲು ದಾರಿ ಮಾಡಿಕೊಟ್ಟವು ಮತ್ತು ಸುಸ್ಥಿರ ಸಮಗ್ರ ಆವಾಸಸ್ಥಾನಕ್ಕಾಗಿ ಪ್ರಾದೇಶಿಕವಾಗಿ ಅಳವಡಿಸಿಕೊಂಡ ಸಮಕಾಲೀನ ಅಭಿವ್ಯಕ್ತಿಗಳನ್ನು ಕಂಡುಕೊಳ್ಳಲು ನನ್ನನ್ನು ಒತ್ತಾಯಿಸಿತು.

ಇತಿಹಾಸದಲ್ಲೇ ಮೊದಲ ಭಾರತೀಯ ವಾಸ್ತುಶಿಲ್ಪಿ ಮತ್ತು ಪ್ರಶಸ್ತಿಯ ಇತಿಹಾಸದಲ್ಲಿ 45 ನೇ ಪ್ರಶಸ್ತಿ ವಿಜೇತರಾಗಿದ್ದಾರೆ. ವಾಸ್ತುಶಿಲ್ಪಿ, ನಗರ ಯೋಜಕ, ಶಿಕ್ಷಕರು, ಅವರ ಸಮಗ್ರತೆ ಮತ್ತು ಭಾರತಕ್ಕೆ ಮತ್ತು ಅದಕ್ಕೂ ಮೀರಿದ ಅವರ ದಣಿವರಿಯದ ಕೊಡುಗೆಗಳಿಗಾಗಿ ಅವರ ಹಲವಾರು ಕೊಡುಗೆಗಳಿಗಾಗಿ, ಪ್ರಿಟ್ಜ್ಕರ್ ಆರ್ಕಿಟೆಕ್ಚರ್ ಪ್ರಶಸ್ತಿ ಜ್ಯೂರಿ 2018 ಪ್ರಿಟ್ಜ್ಕರ್ ಲಾರಿಯೇಟ್ ಆಗಿ ಬಾಲಕೃಷ್ಣ ದಾಶಿ ಅವರನ್ನು ಆಯ್ಕೆ ಮಾಡಿರುತ್ತಾರೆ ಎಂದು ತೀರ್ಪುಗಾರರ ಉಲ್ಲೇಖಿಸಿದ್ದಾರೆ. 2005 ರಿಂದ 2007 ರ ನಡುವಿನ ಪ್ರಿಟ್ಜ್ಕರ್ ಆರ್ಕಿಟೆಕ್ಚರ್ ಪ್ರೈಜ್ ಜ್ಯೂರರ್ ಆಗಿ ಸೇವೆ ಸಲ್ಲಿಸಿದ್ದ 90 ವರ್ಷ ವಯಸ್ಸಿನ ವಾಸ್ತುಶಿಲ್ಪಿ, ಅರ್ಬನ್ ಪ್ಲಾನರ್ ಮತ್ತು ಶಿಕ್ಷಕ, ಜೀವನಶೈಲಿ ಮತ್ತು ವಾಸ್ತುಶಿಲ್ಪದ ಬೆಸುಗೆಯನ್ನು ಮಾಡುವಾಗ ಆಚರಿಸಲಾಗುತ್ತದೆ ಎಂದು ನನ್ನ ನಂಬಿಕೆಯನ್ನು ಇದು ಪುನರುಚ್ಚರಿಸುತ್ತದೆ. ವರ್ಷದ ಜ್ಯೂರಿಯ ಸದಸ್ಯರು ಭಾರತೀಯ ಕೈಗಾರಿಕೋದ್ಯಮಿ, ಹೂಡಿಕೆದಾರರು, ಲೋಕೋಪಕಾರಿ ಮತ್ತು ಟಾಟಾ ಸನ್ಸ್, ರತನ್ ಟಾಟಾದ ಮಾಜಿ ಅಧ್ಯಕ್ಷರಾಗಿದ್ದರು.



ದೋಶಿಯ ವಾಸ್ತುಶೈಲಿಯು ಮಾನವ ಜೀವನದ ಮೂಲಭೂತ ಅಗತ್ಯತೆಗಳು, ಸ್ವಯಂ ಮತ್ತು ಸಂಸ್ಕೃತಿಯ ಸಂಪರ್ಕ ಮತ್ತು ಸಾಮಾಜಿಕ ಸಂಪ್ರದಾಯಗಳ ಅರ್ಥೈಸುವಿಕೆ, ಸ್ಥಳ ಮತ್ತು ಅದರ ಪರಿಸರಕ್ಕೆ ಸಂಬಂಧಿಸಿದಂತೆ ಮತ್ತು ಆಧುನಿಕತಾವಾದದ ಪ್ರತಿಕ್ರಿಯೆಯ ನಡುವಿನ ಸಂಬಂಧವನ್ನು ಪರಿಶೋಧಿಸುತ್ತದೆ. ಬಾಲ್ಯದ ನೆನಪುಗಳು, ಹವಾಮಾನದ ಲಯದಿಂದ ದೇವಾಲಯದ ಘಂಟೆಗಳ ರಿಂಗಿಂಗ್ಗೆ, ಅವರ ವಿನ್ಯಾಸಗಳನ್ನು ತಿಳಿಸಿ. ಅವರು ವಾಸ್ತುಶೈಲಿಯನ್ನು ದೇಹದ ವಿಸ್ತರಣೆಯೆಂದು ವಿವರಿಸುತ್ತಾರೆ, ಮತ್ತು ಹವಾಮಾನ, ಭೂದೃಶ್ಯ, ಮತ್ತು ನಗರೀಕರಣದ ಬಗ್ಗೆ ಗಮನ ಹರಿಸುವಾಗ ಅವರ ಗಮನವನ್ನು ಸಮರ್ಥವಾಗಿ ನಿರ್ವಹಿಸುವ ಅವರ ಸಾಮರ್ಥ್ಯ, ವಸ್ತುಗಳ ಮೇಲಿನ ಆಯ್ಕೆ, ಅತಿಕ್ರಮಿಸುವ ಜಾಗಗಳು, ಮತ್ತು ನೈಸರ್ಗಿಕ ಮತ್ತು ಸುಸಂಗತಗೊಳಿಸುವ ಅಂಶಗಳನ್ನು ಬಳಸಿಕೊಳ್ಳುವ ಮೂಲಕ ಪ್ರದರ್ಶಿಸಲಾಗುತ್ತದೆ.


2018 ರ ಜ್ಯೂರಿ ಉಲ್ಲೇಖದ ಭಾಗವು ಭಾಗಶಃ ವರ್ಷಗಳಲ್ಲಿ, ಬಾಲಕೃಷ್ಣ ದೋಷಿ ಯಾವಾಗಲೂ ಗಂಭೀರವಾದ ವಾಸ್ತುಶಿಲ್ಪವನ್ನು ಸೃಷ್ಟಿಸಿದೆ, ಎಂದಿಗೂ ಅಲಂಕಾರಿಕ ಅಥವಾ ಪ್ರವೃತ್ತಿಗಳ ಅನುಯಾಯಿಯಾಗಿದ್ದಾರೆ. ಉನ್ನತ ಮಟ್ಟದ ಜವಾಬ್ದಾರಿ ಮತ್ತು ಅಧಿಕೃತ ವಾಸ್ತುಶೈಲಿಯ ಮೂಲಕ ತನ್ನ ದೇಶದ ಮತ್ತು ಅದರ ಜನರಿಗೆ ಕೊಡುಗೆ ನೀಡುವ ಆಸೆ, ಅವರು ಸಾರ್ವಜನಿಕ ಆಡಳಿತ ಮತ್ತು ಉಪಯುಕ್ತತೆಗಳನ್ನು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಯೋಜನೆಗಳನ್ನು ರಚಿಸಿದ್ದಾರೆ, ಮತ್ತು ಖಾಸಗಿ ಗ್ರಾಹಕರ ನಿವಾಸಗಳು. ತೀರ್ಪುಗಾರರ ಮುಂದುವರಿಯುತ್ತದೆ, ಅವರ ಕಟ್ಟಡಗಳು ಇರುವ ಸಂದರ್ಭದ ಬಗ್ಗೆ ದೋಷಿಯವರಿಗೆ ಚೆನ್ನಾಗಿ ತಿಳಿದಿರುತ್ತದೆ. ಅವರ ಪರಿಹಾರಗಳು ಸಾಮಾಜಿಕ, ಪರಿಸರ ಮತ್ತು ಆರ್ಥಿಕ ಆಯಾಮಗಳನ್ನು ಪರಿಗಣಿಸಿವೆ ಮತ್ತು ಆದ್ದರಿಂದ ಅವರ ವಾಸ್ತುಶಿಲ್ಪವು ಸಮರ್ಥನೀಯತೆಯೊಂದಿಗೆ ಸಂಪೂರ್ಣವಾಗಿ ನಿಶ್ಚಿತವಾಗಿದೆ. ಹಾಗಾಗಿಯೇ ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ(90) ಅವರು ಪ್ರಿಟ್ಝ್‌ಕರ್‌ ಆರ್ಕಿಟೆಕ್ಚರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುಣೆ ಮೂಲದವರಾದ ಬಾಲಕೃಷ್ಣ ದೋಷಿ ಈ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯರಾಗಿದ್ದಾರೆ.ಬಾಲಕೃಷ್ಣ ದೋಷಿ ಅವರು ಗಂಭೀರವಾದ ವಾಸ್ತುಶಿಲ್ಪವನ್ನು ಸೃಷ್ಟಿಸುತ್ತ ಬಂದಿದ್ದಾರೆ. ಅತ್ಯುತ್ತಮ ಗುಣಮಟ್ಟ, ದೃಢವಾದ ಹೊಣೆಗಾರಿಕೆ ಮತ್ತು ತಮ್ಮ ದೇಶಕ್ಕೆ ಏನಾದರೂ ಕೊಡುಗೆ ನೀಡಲೇಬೇಕೆಂಬ ಹಂಬಲ ಅವರದ್ದಾಗಿತ್ತು. ಅವರು ಬರೇ ಕಟ್ಟಡಗಳ ವಿನ್ಯಾಸ ಮಾಡುತ್ತಿರಲಿಲ್ಲ, ಸಂಸ್ಥೆಗಳ ವಿನ್ಯಾಸ ಮಾಡುತ್ತಿದ್ದರು. ಹಲವಾರು ಸರಕಾರಿ ಮತ್ತು ಸಾರ್ವಜನಿಕ ಸೌಲಭ್ಯಗಳ ಕಟ್ಟಡಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ವಿನ್ಯಾಸಗಳನ್ನು ರಚಿಸಿದ್ದರು. ಎಂದು ಪ್ರಿಟ್ಝ್‌ಕರ್‌ ಆಯ್ಕೆದಾರರ ಮಂಡಳಿ ತಿಳಿಸಿದೆ.


**********************************************ಸಂಗ್ರಹ: ANAND SHIKKERI (Asst master)
ಕೃಪೆ: ಗೂಗಲ್ & ಪ್ರಜಾವಾಣಿ
***********************************************

ಗುರುವಾರ, ಮಾರ್ಚ್ 8, 2018

ಜಾಗತೀಕ ಸೇನಾ ಬಲದ ಸಮೀಕ್ಷೆಯಲ್ಲಿ ಭಾರತ


ಸೇನಾ ಬಲದ ಜಾಗತಿಕ ಸಮೀಕ್ಷೆ: ಭಾರತಕ್ಕೆ 4ನೇ ಸ್ಥಾನ

ಸೇನಾ ಬಲದ ಜಾಗತಿಕ ಸಮೀಕ್ಷೆ: ಭಾರತಕ್ಕೆ 4ನೇ ಸ್ಥಾನ
ಬೆಂಗಳೂರು: ವಿವಿಧ ದೇಶಗಳ ಸೇನಾ ಶಕ್ತಿ ಎಷ್ಟಿದೆ ಎಂಬ ಜಾಗತಿಕ ಸಮೀಕ್ಷೆ ಮತ್ತು ಅದರ ಆಧಾರದಲ್ಲಿ ನೀಡಲಾದ ರ‍್ಯಾಂಕಿಂಗ್‌ ಅನ್ನು ಗ್ಲೋಬಲ್‌ ಫೈರ್‌ ಪವರ್‌ ಸಂಸ್ಥೆಯು ಬಿಡುಗಡೆಗೊಳಿಸಿದೆ.
ಸೇನಾ ಶಕ್ತಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ ಭಾರತ ನಾಲ್ಕನೇ ಸ್ಥಾನ ಪಡೆದಿದೆ. 50 ಅಂಶಗಳ ಆಧಾರದಲ್ಲಿ ಈ ಸಮೀಕ್ಷೆ ನಡೆಸಲಾಗಿದೆ.
ಸಣ್ಣ ಮತ್ತು ಹೆಚ್ಚು ಆಧುನಿಕವಾದ ದೇಶಗಳು ಮತ್ತು ದೊಡ್ಡ ಹಾಗೂ ಕಡಿಮೆ ಆಧುನಿಕವಾದ ದೇಶಗಳ ಸಾಮರ್ಥ್ಯವನ್ನು ಅಳೆಯುವುದಕ್ಕೆ ಬೇಕಾದ ರೀತಿಯಲ್ಲಿ ಸೂತ್ರವನ್ನು ಅಭಿವೃದ್ಧಿಪಡಿಸಲಾಗಿತ್ತು. ಬೋನಸ್‌ ಅಂಕ ಮತ್ತು ದಂಡನಾ ಅಂಕಗಳ ನೀಡಿಕೆ ಮೂಲಕ ಎಲ್ಲ ದೇಶಗಳಿಗೂ ಸಮಾನ ಅವಕಾಶ ನೀಡಲಾಗಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.
ಅಂಕ ನೀಡಿಕೆಗೆ ಪರಿಗಣನೆ
* ಶಸ್ತ್ರಾಸ್ತ್ರದ ಒಟ್ಟು ಸಂಖ್ಯೆಯನ್ನು ಮಾತ್ರ ಆಧರಿಸಿ ಶ್ರೇಣಿ ನೀಡಲಾಗಿಲ್ಲ. ಶಸ್ತ್ರಾಸ್ತ್ರ ವೈವಿಧ್ಯ ಮತ್ತು ಸಮತೋಲನಕ್ಕೆ ಒತ್ತು ನೀಡಲಾಗಿದೆ.
* ದೇಶಗಳ ಜನಸಂಖ್ಯೆ ಆಧಾರದಲ್ಲಿಯೂ ಅಂಕ ನೀಡಲಾಗಿದೆ. ಯುದ್ಧಕ್ಕೆ ಹೋಗುವ ಸಾಮರ್ಥ್ಯ ಇರುವ ಜನರ ಸಂಖ್ಯೆ (ಸೈನಿಕರಲ್ಲದೆ) ಎಷ್ಟು ಎಂಬುದರ ಅಧಾರದಲ್ಲಿಯೂ ಅಂಕ ನೀಡಲಾಗಿದೆ.
* ಅಣ್ವಸ್ತ್ರ ಇದೆ ಎಂದು ಘೋಷಿಸಿರುವ ಅಥವಾ ಘೋಷಿಸಿಲ್ಲದ ದೇಶಗಳಲ್ಲಿ ಇರುವ ಅಣ್ವಸ್ತ್ರಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ. ಆದರೆ ಈ ದೇಶಗಳಿಗೆ ಬೋನಸ್‌ ಅಂಕ ನೀಡಲಾಗಿದೆ.
* ಭೌಗೋಳಿಕ ಅಂಶಗಳು, ನೈಸರ್ಗಿಕ ಸಂಪನ್ಮೂಲ, ಸ್ಥಳೀಯ ಕೈಗಾರಿಕೆಯ ಪ್ರಭಾವಗಳಿಗೂ ಅಂಕ ನೀಡಲಾಗಿದೆ.
* ಎಲ್ಲೆಡೆಯಿಂದಲೂ ನೆಲದಿಂದ ಆವೃತವಾಗಿರುವ ದೇಶಗಳಲ್ಲಿ ನೌಕಾಪಡೆ ಇಲ್ಲ ಎಂಬುದಕ್ಕೆ ಅಂಕ ಕಡಿತಗೊಳಿಸಲಾಗಿಲ್ಲ.
* ನೌಕಾಪಡೆಗಳಿರುವ ದೇಶಗಳಲ್ಲಿ ವೈವಿಧ್ಯಮಯ ನೌಕೆಗಳು ಇಲ್ಲದಿದ್ದಾಗ ಅಂಕ ಕಡಿತ ಮಾಡಲಾಗಿದೆ.
* ನ್ಯಾಟೊ ಮಿತ್ರಕೂಟದ ನಡುವೆ ಸಂಪನ್ಮೂಲ ಹಂಚಿಕೆಗೆ ಅವಕಾಶ ಇರುವುದರಿಂದ ಈ ದೇಶಗಳಿಗೆ ಬೋನಸ್‌ ಅಂಕ ಸಿಕ್ಕಿದೆ.
* ರಾಜಕೀಯ ಮತ್ತು ಸೇನೆಯ ಈಗಿನ ನಾಯಕತ್ವವನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ.

133 ದೇಶಗಳ ಸಮೀಕ್ಷೆ ನಡೆಸಲಾಗಿದೆ: ಸೈನಿಕರ ಸಂಖ್ಯೆ

1. ಚೀನಾ 22,60,000
2. ಅಮೆರಿಕ 13,73,650
3. ಭಾರತ 13,62,500
4. ಉತ್ತರ ಕೊರಿಯಾ 9,45,000
5. ರಷ್ಯಾ 7,98,527
6. ಪಾಕಿಸ್ತಾನ 6,37,000
ಯುದ್ಧವಿಮಾನ/ಹೆಲಿಕಾಪ್ಟರ್‌
1. ಅಮೆರಿಕ 13,762
2. ರಷ್ಯಾ  3,794
3. ಚೀನಾ 2,955
4. ಭಾರತ 2,101
5. ಜಪಾನ್‌ 1,594
10. ಪಾಕಿಸ್ತಾನ 951
ಯುದ್ಧ ಟ್ಯಾಂಕ್‌ಗಳು
1. ರಷ್ಯಾ 20,216
2. ಚೀನಾ 6,457
3. ಅಮೆರಿಕ 5,884
4. ಉತ್ತರ ಕೊರಿಯಾ 5,025
5. ಸಿರಿಯಾ 4,640
6. ಭಾರತ 4,426
8. ಪಾಕಿಸ್ತಾನ 2,924
ನೌಕಾಬಲ
1. ಉತ್ತರ ಕೊರಿಯಾ 967
2. ಚೀನಾ 714
3. ಅಮೆರಿಕ 415
4. ಇರಾನ್‌ 398
5. ರಷ್ಯಾ 352
6. ಈಜಿಪ್ಟ್‌ 319
7. ಭಾರತ 295
11. ಪಾಕಿಸ್ತಾನ 197
ಸಮಗ್ರ ರ‍್ಯಾಂಕಿಂಗ್‌
1. ಅಮೆರಿಕ
2. ರಷ್ಯಾ
3. ಚೀನಾ
4. ಭಾರತ
13. ಪಾಕಿಸ್ತಾನ

ರಕ್ಷಣಾ ಬಜೆಟ್‌

1. ಅಮೆರಿಕ  5.87 ಲಕ್ಷ ಕೋಟಿ ಡಾಲರ್‌ (ಅಂದಾಜು ₹410 ಲಕ್ಷ ಕೋಟಿ ರೂಪಾಯಿ)
2. ಚೀನಾ 1.61 ಲಕ್ಷ ಕೋಟಿ ಡಾಲರ್‌ (ಸುಮಾರು ₹ 100 ಲಕ್ಷ ಕೋಟಿ)
3. ಸೌದಿ ಅರೇಬಿಯಾ 56,725 ಕೋಟಿ ಡಾಲರ್‌ (ಸುಮಾರು ₹37 ಲಕ್ಷ ಕೋಟಿ)
4. ಭಾರತ 51,000 ಕೋಟಿ ಡಾಲರ್‌ (32,500 ಲಕ್ಷ

ಬುಧವಾರ, ಮಾರ್ಚ್ 7, 2018

ಸಂತ ಸೇವಾಲಾಲ ದಿನಾಚರಣೆ



















ಸಂತ_ಸೇವಾಲಾಲರ ೨೭೯ ನೇ ಜಯಂತಿಯ ಪ್ರಯುಕ್ತ ಅವರ ಇತಿಹಾಸ ನನ್ನ ಓದುಗರಿಗಾಗಿ


ಪೆಬ್ರವರಿ 15, 2018 ಮಹಾ ಸಂತ ಶ್ರೀ ಸೇವಾಲಾಲರ 279ನೇ ಜಯಂತಿ. ಕರ್ನಾಟಕ ಸರಕಾರ ಈ ಮಹಾಸಂತನ ಜಯಂತಿಯನ್ನು ಕರ್ನಾಟಕದಾದ್ಯಂತ ಮೊಟ್ಟಮೊದಲ ಬಾರಿಗೆ ಸರಕಾರದ ವತಿಯಿಂದ ಆಚರಿಸುತ್ತಿದ್ದು, ತನ್ನಿಮಿತ್ತ ಈ ಲೇಖನ, ಲೋಕಕಲ್ಯಾಣಕ್ಕಾಗಿ ಈ ಭರತ ಭೂಮಿಯಲ್ಲಿ ಹಲವು ಜನ ಸಾಧು-ಸಂತರು, ಸತ್ಪುರುಷರು, ಮೇಧಾವಿಗಳು, ದಾರ್ಶನಿಕರು, ಬುದ್ಧಿಜೀವಿಗಳು ಮತ್ತು ತ್ಯಾಗಿಗಳು ಅವತರಿಸಿದ್ದಾರೆ. ಜನತೆಯಲ್ಲಿನ ಜಾತಿಪದ್ಧತಿ ಮತ್ತು ಧರ್ಮಾಂಧತೆಗಳನ್ನು ತೊಡೆದುಹಾಕಲು ಆಯಾ ಕಾಲಘಟ್ಟದಲ್ಲಿ ಹಲವು ಜನ ಸಾಂಸ್ಕೃತಿಕ ನಾಯಕರು, ಮೇಧಾವಿಗಳು ಹೋರಾಟ ಮಾಡಿದ್ದಾರೆ.

ಸೇವಾಲಾಲನ ಜನನ, ಮರಣ, ಜೀವನ, ಸಾಧನೆ, ಹೋರಾಟಗಳ ಹಿನ್ನೆಲೆಯಲ್ಲಿ ಲಂಬಾಣಿ ಮೌಖಿಕ ಪರಂಪರೆಯಲ್ಲಿ ಹಲವು ಐತಿಹ್ಯ ಕಥೆ ಪುರಾಣಗಳು ಹುಟ್ಟಿಕೊಂಡಿವೆ. ಇವುಗಳು ಸೇವಾಲಾಲನ ವಾಸ್ತವ ಸಂಗತಿಗಳಿಗಿಂತ ಹೆಚ್ಚಾಗಿ ಅವನನ್ನು ಒಬ್ಬ ಪೌರಾಣಿಕ ವ್ಯಕ್ತಿಯನ್ನಾಗಿ ಚಿತ್ರಿಸಿ ದೈವತ್ವಕ್ಕೆ ಏರಿಸಿವೆ. ವಾಸ್ತವವಾಗಿ ಸೇವಾಲಾಲ ತಮ್ಮ ಜೀವಿತ ಕಾಲಾವಧಿಯಲ್ಲಿ ತನ್ನನ್ನು ನಂಬಿದ ಒಂದು ಜನಾಂಗದ ತನ್ನದೆಲ್ಲವನ್ನೂ ಧಾರೆ ಎರೆದ ಒಬ್ಬ ಮಹಾಸಂತನೆಂಬುದು ಸತ್ಯ. ಲಂಬಾಣಿಗರಲ್ಲಿ ಸೇವಾಲಾಲ್ ಬಹುದೊಡ್ಡ ಸಾಧುಪುರುಷ. ಬಾಲಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಅಧ್ಯಾತ್ಮವನ್ನು ಅಪ್ಪಿಕೊಂಡು, ತನ್ನ ಜನಾಂಗದ ಸೇವೆಯನ್ನು ಮಾಡಿದ ಮಹಾನ್ ಹಿತಚಿಂತಕ. ಅಧ್ಯಾತ್ಮದ ಮೂಲಕವಾಗಿ ಜನಾಂಗಕ್ಕೆ ಉಪದೇಶಗಳನ್ನು ನೀಡಿ, ಸನ್ಮಾರ್ಗದತ್ತ ಕೊಂಡೊಯ್ದ ಮಾರ್ಗದರ್ಶಕ. ಸೇವಾಲಾಲರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಇಂದು ಐಕ್ಯತೆ ಯನ್ನುಂಟುಮಾಡಿರುವುದು ಸ್ಪಷ್ಟ.

ಇಂದು ಬಂಜಾರರು ಸಾಂಸ್ಕೃತಿಕ ನೆಲೆಯಲ್ಲಿ ತನ್ನ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ಮಹಾನುಭಾವರ ಸತ್ಕಾರ್ಯಗಳೇ ಕಾರಣವಾಗಿವೆ. ಹೀಗಾಗಿ ಬಂಜಾರ ಸಮುದಾಯದಲ್ಲಿ ಸೇವಾಲಾಲರು ವೀರನಾಗಿ, ವಿರಾಗಿಯಾಗಿ, ಒಬ್ಬ ಶ್ರೇಷ್ಠ ದಾರ್ಶನಿಕನಾಗಿ ಮತ್ತು ಸಾಂಸ್ಕೃತಿಕ ನಾಯಕನಾಗಿ ಚಿರಸ್ಥಾಯಿಯಾಗಿದ್ದಾರೆ. ಸೇವಾಲಾಲರು ಹುಟ್ಟಿನಿಂದಲೇ ದೈವಾಂಶ ಸಂಭೂತ. ಆತನ ಚರಿತ್ರೆ, ಪವಾಡ, ಅವತಾರ, ಮೊದಲಾದವುಗಳನ್ನು ಲಂಬಾಣಿಗಳು ತಮ್ಮ ಭಜನೆಗಳಲ್ಲಿ ದಿನಗಟ್ಟಲೆ, ವಾರಗಟ್ಟಲೇ ಹಾಡುತ್ತಾರೆ. ಸೇವಾಲಾಲರ ಕಾಲ, ಜನನ, ವೃತ್ತಾಂತ, ಮರಣ ಮತ್ತು ಬದುಕಿನ ಬಗೆಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆದಿದೆ. ಚಾರಿತ್ರಿಕ ಆಧಾರಗಳು ಇಲ್ಲದ್ದರಿಂದ ಯಾವುದೇ ಖಚಿತವಾದ ಮಾಹಿತಿಗಳು ದೊರೆಯುವುದಿಲ್ಲ. ಅವರ ಕಥನ ಗೀತೆಗಳು, ಲಾವಣಿಗಳು, ಭಜನೆ-ಗೀತೆ ಹಾಗೂ ಕೆಲವು ಭೌಗೋಳಿಕ ಆಧಾರಗಳನ್ನು ಆಧರಿಸಿ ಇದೀಗ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪವೇ ಸೇವಾಲಾಲರ ಜನ್ಮಸ್ಥಳವೆಂದು ನಿರ್ಧರಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿಗೂ ಕಂಡುಬರುವ ಝುಮ್ರಿ ಝೋಲ್, ಭೂರಿಪಟಾರ್, ಚಂದನಖೋಳಿ, ಕಾಳೋಕೂಂಡೋ, ಕಿಂಚೇರ್ ಗುಂಡಿ, ಬನದವ್ವನ ಗುಡಿ ಮತ್ತು ಗೊಲ್ಲನಮಟ್ಟಿ ಮೊದಲಾದ ಸ್ಥಳಗಳು ಅವರ ಲಾವಣಿಗಳಲ್ಲಿ ಸ್ಪಷ್ಟವಾಗಿ ದಾಖಲಾಗಿರುವುದರಿಂದ ಸೂರಗೊಂಡನಕೊಪ್ಪ ಪ್ರದೇಶವೇ ಸೇವಾಲಾಲರ ಜನ್ಮಸ್ಥಳ ಆಗಿರುವುದರಲ್ಲಿ ಯಾವ ಸಂದೇಹಗಳು ಇರಲಾರವು.

ಭೀಮಾ ನಾಯಕ ಹಾಗೂ ಧರ್ಮಿಣಿ ಬಾಯಿಗೆ ಮದುವೆ ಮಾಡುತ್ತಾರೆ. ಮದುವೆಯಾಗಿ 12 ವರ್ಷ ಕಳೆದರೂ ಸಂತಾನ ಪ್ರಾಪ್ತಿಯಾಗುವುದಿಲ್ಲ. ಈ ದಂಪತಿಗಳಿಬ್ಬರೂ ಜಗನ್ಮಾತೆಯ ಭಕ್ತಿಸೇವೆಯಲ್ಲಿ ಸುಖ-ಸಂತೋಷದಿಂದ ಬದುಕು ಸಾಗಿಸುತ್ತಿದ್ದರು. ಸಂತಾನ ಪ್ರಾಪ್ತಿಗಾಗಿ ಕಂಡ ಕಂಡ ದೇವರು-ದೇವತೆಗಳಿಗೆ ಮೊರೆ ಹೋದರೂ ಪ್ರಯೋಜನವಾಗಲಿಲ್ಲ. ಕೊನೆಗೆ, ಜಗದಂಬೆಯನ್ನೇ ನಂಬಿಕೊಂಡು ಅವಳ ಭಕ್ತಿಯಲ್ಲಿ ಕಾಲ ಕಳೆಯುತ್ತಾ, ಸಂತಾನ ಪ್ರಾಪ್ತಿಗಾಗಿ ಸಂಕಲ್ಪವನ್ನು ಮಾಡಿ ಭೀಮಾ ನಾಯಕರು ಘೋರವಾದ ತಪಸ್ಸನ್ನು ಕೈಗೊಳ್ಳುತ್ತಾನೆ. ಕೊನೆಗೆ ಶಿವ-ಪಾರ್ವತಿಯ ಕರುಣೆಯಿಂದ ಸಂತಾನ ಭಾಗ್ಯವನ್ನು ಈ ನಡುವೆ ತಮಗೆ ಮಗುವಾದರೆ ಭಕ್ತಿಯ ಹೆಸರಲ್ಲಿ ನಿನಗೆ ಒಪ್ಪಿಸುತ್ತೇವೆ ಎಂದು ಮರಿಯಮ್ಮನಲ್ಲಿ ಹರಕೆ ಹೊತ್ತಿರುತ್ತಾರೆ. ಹೀಗೆ ಹುಟ್ಟಿದ ಮಗು ಸಾಮಾನ್ಯ ಮಗುವಾಗಿರಲಿಲ್ಲ. ಅವನೊಬ್ಬ ಸತ್ಪುರುಷನಾಗಿದ್ದ. ಮಾಣಿಕ್ಯದಂತಹ ಮಗುವಿಗೆ ಸಾಕ್ಷಾತ್ ಮಾತೆ ಜಗದಂಬೆಯೇ ಮಾರುವೇಷದಲ್ಲಿ ಬಂದು, ಸೇವಾಭಾಯಾ, ಸೇವಾಲಾಲ ಎಂದು ನಾಮಕರಣ ಮಾಡುತ್ತಾಳೆ.

ಆ ಮಗು ಶಿವನ ಅವತಾರಿಯಾಗಿದ್ದು, ದೇವಿಯ ಭಕ್ತನಾಗಿದ್ದಾನೆ. ಆತನು ಬಂಜಾರ ಕುಲದ ವಂಶೋದ್ಧಾರಕನಾಗಿದ್ದು, ದುಷ್ಟರನ್ನು ಸಂಹರಿಸಿ, ಶಿಷ್ಟರ ರಕ್ಷಣೆ ಮಾಡುವನೆಂದು ಜಗದಂಬೆ ಹೇಳಿ, ಅಲ್ಲಿಂದ ಕಾಲಚಕ್ರ ಗತಿಸಿ ಸೇವಾಲಾಲನಿಗೆ 12 ವರ್ಷ ತುಂಬಿದಾಗ ಮರಿಯಮ್ಮ ತನ್ನ ಷರತ್ತನ್ನು ಈಡೇರಿಸಬೇಕೆಂದು ಧರ್ಮಿಣಿ ಬಾಯಿಯ ಕನಸಿನಲ್ಲಿ ಬಂದು ಸೇವಾಲಾಲನನ್ನು ತನ್ನ ಸೇವೆಗೆ ಬಿಡಬೇಕೆಂದು ಒತ್ತಾಯಿಸುತ್ತಾಳೆ. ಅದಕ್ಕೆ ಧರ್ಮಿಣಿಯು ಒಪ್ಪದೇ ಹೋದಾಗ ನೇರವಾಗಿ ಸೇವಾಲಾಲನನ್ನು ತನ್ನ ಭಕ್ತನಾಗಬೇಕೆಂದು, ತನ್ನ ಜತೆಗೆ ಬರಬೇಕೆಂದು ಕೇಳಿದಾಗ ಅವನೂ ಭಕ್ತನಾಗಲು ತಿರಸ್ಕರಿಸುತ್ತಾನೆ. ತಾನು ಪರಮಾತ್ಮನ ಸೇವಕನೆಂದು, ಮರಿಯಮ್ಮಳ ಸೇವೆ ಮಾಡಲಾರನೆಂದು ಹಠ ಹಿಡಿಯುತ್ತಾನೆ. ಇದರಿಂದ ಅವಮಾನಿತಳಾದ ಮರಿಯಮ್ಮ ಸೇವಾಲಾಲನ ಕುಟುಂಬದ ಸರ್ವಸ್ವವನ್ನು ನಾಶ ಮೂಲಕ ಪರಿಪರಿಯಾಗಿ ಕಾಡಿಸುತ್ತಾಳೆ. ಇದರಿಂದ ಹತಾಶನಾದ ಸೇವಾಭಾಯಾ ಅನಿವಾರ್ಯವಾಗಿ ಜಗನ್ಮಾತೆಯ ಭಕ್ತನಾಗಲು ಒಪ್ಪಿಕೊಳ್ಳುತ್ತಾನೆ.

ಕಾಲಗತಿಯಲ್ಲಿ ಹತ್ತಾರು ವರ್ಷಗಳವರೆಗೆ ಮರಿಯಮ್ಮನ ಸೇವೆಗೆ ತೊಡಗಿಸಿಕೊಂಡ ಸೇವಾಲಾಲರು ಮುಂದೆ ಸಮುದಾಯದಲ್ಲಿ ಜಗನ್ಮಾತೆಗಿಂತ ಹೆಚ್ಚಿನ ಜನಪ್ರಿಯತೆಯನ್ನು ಪಡೆಯುತ್ತಾನೆ. ಜನರು ಮರಿಯಮ್ಮನನ್ನು ಮರೆತು ಸೇವಾಲಾಲನನ್ನೇ ಪೂಜಿಸುವಂತೆ ಮಹಾನ್ ಸಾಧಕನಾಗಿ ಮೆರೆಯುತ್ತಾನೆ. ತನ್ನ ಜನಸಮುದಾಯದ ಏಳಿಗೆಗಾಗಿ ಶ್ರಮಿಸಿ, ಅವರ ಬದುಕನ್ನು ಹಸನುಗೊಳಿಸಲು ನಿರಂತರವಾಗಿ ಹೋರಾಡುತ್ತಾನೆ. ಮರಿಯಮ್ಮಳಿಂದ ಮೊದಲೇ ವರವನ್ನು ಪಡೆದುಕೊಂಡಿದ್ದ ಸೇವಾಲಾಲ ತನ್ನ ಭಕ್ತರು ಕೇಳಿದ ವರಗಳ ತಕ್ಷಣವೇ ಈಡೇರಿಸಿ ಪ್ರಖ್ಯಾತಿಯನ್ನು ಪಡೆದುಕೊಂಡನು. ಈತನ ಜನಪ್ರಿಯತೆಯನ್ನು ಕಂಡು ಮರಿಯಮ್ಮ ಸಹಿಸಲಾರದೇ ಅವನು ಬ್ರಹ್ಮಚಾರಿಯಾಗಿರುವುದರಿಂದಲೇ ಇಷ್ಟೊಂದು ಪ್ರಭಾವಶಾಲಿಯಾಗಿರವನೆಂದು ಬಗೆದು, ಅವನಿಗೆ ಮದುವೆ ಮಾಡಿಸುವ ಮೂಲಕ ಆತನ ಜಜನಪ್ರಿಯತೆಯನ್ನು ಕುಗ್ಗಿಸಬೇಕೆಂದು ನಿರ್ಧರಿಸುತ್ತಾಳೆ. ಅಂತೆಯೇ, ಸೇವಾನ ಬಳಿಗೆ ಬಂದು ಮದುವೆಯಾಗುವಂತೆ ಅವನನ್ನು ಒತ್ತಾಯಿಸುತ್ತಾಳೆ. ಅದಕ್ಕೆ ಒಪ್ಪಿಕೊಳ್ಳದ ಸೇವಾಲಾಲ ತಾನು ಸಮಸ್ತ ಸಮುದಾಯದವರಿಗೆ ‘‘ಭಾಯಾ’’ (ಸಹೋದರ) ಆಗಿರುವುದರಿಂದ ನಾನು ಯಾರೊಂದಿಗೆ ಮದುವೆಯಾಗಲೆಂದು ವಾದಿಸುತ್ತಾನೆ.

ಎಲ್ಲಾ ನಾರಿಯರು ನನಗೆ ಸಹೋದರಿಯರು ಆಗಿರುವುದರಿಂದ ಈ ಮದುವೆ ಅಲ್ಲಗಳೆಯುತ್ತಾನೆ. ಆಧ್ಯಾತ್ಮ ಜೀವಿಯಾಗಿ ಸಾಧಕನಾಗಿದ್ದ ಸೇವಾಭಾಯಾ ಮರಿಯಮ್ಮನ ಮಾತನ್ನು ತಿರಸ್ಕರಿಸುತ್ತಾನೆ. ಮರಿಯಮ್ಮ ಅವಮಾನಿತಳಾಗಿ ಮತ್ತೆ ಮತ್ತೆ ಒತ್ತಾಯಿಸಿದಾಗ, ಬ್ರಹ್ಮನು ತನ್ನ ಹಣೆಬರಹದಲ್ಲಿ ಮದುವೆಯಾಗುವುದನ್ನು ಬರೆದಿಲ್ಲವಾದ್ದರಿಂದ ಮದುವೆಯಾಗುವುದಾದರೂ ಹೇಗೆ ? ಎಂದು ಪ್ರಶ್ನಿಸುತ್ತಾನೆ. ಹಾಗಾದರೆ, ನಿನ್ನ ಹಣೆಯ ಬರಹವನ್ನು ಪರೀಕ್ಷಿಸಲು ದೇವಲೋಕಕ್ಕೆ ಹೋಗೋಣವೆಂದು ಅವನನ್ನು ಕರೆಯುತ್ತಾಳೆ. ಅದಕ್ಕೆ ಸಮ್ಮತಿಸಿದ ಸೇವಾಭಾಯಾ ಮರಿಯಮ್ಮನೊಂದಿಗೆ ದೇವಲೋಕಕ್ಕೆ ಹೋಗಲು ಅಣಿಯಾಗುತ್ತಾನೆ. ಸೇವಾ ಭಾಯಾ ತಾನು ಸ್ವರ್ಗಲೋಕಕ್ಕೆ ತನ್ನ ಹಣೆಯ ಬರಹವನ್ನು ಕೇಳಲು ಬ್ರಹ್ಮನಲ್ಲಿಗೆ ಹೋಗುವ ಪ್ರಸ್ತಾಪಿಸಿ, ತನ್ನ ಶರೀರವನ್ನು ದೇವಸ್ಥಾನದಲ್ಲಿಟ್ಟು, ಬೇವಿನ ಸೊಪ್ಪಿನಲ್ಲಿ ಮುಚ್ಚಿಡಬೇಕೆಂದು, ತಾನು ಹಿಂದಿರುಗಿ ಬರುವವರೆಗೆ ನಿರಂತರವಾಗಿ ಭಜನೆ ಮಾಡುತ್ತಿರಬೇಕೆಂದು, ಬೇವಿನ ಸೊಪ್ಪಿನಲ್ಲಿರುವ ನನ್ನ ಶರೀರವನ್ನು ಅಪ್ಪಿ-ತಪ್ಪಿಯೂ ಯಾರೂ ಮುಟ್ಟಬಾರದೆಂದು ತನ್ನ ಬಂಧು-ಬಾಂಧವರಿಗೆಲ್ಲಾ ತಿಳಿಸಿ, ಸ್ವರ್ಗಕ್ಕೆ ಹೊರಡುತ್ತಾನೆ.

ಅವನು ಹೇಳಿ ಹೋದಂತೆ ಸಮುದಾಯದವರೆಲ್ಲಾ ಕಟ್ಟುನಿಟ್ಟಾಗಿ ನಡೆದುಕೊಳ್ಳುತ್ತಾರೆ. ಸ್ವರ್ಗದಲ್ಲಿ ಪರಮಾತ್ಮನ ಸಮಕ್ಷಮದಲ್ಲಿ ಮರಿಯಮ್ಮ ಮತ್ತು ಸೇವಾಲಾಲ ತಮ್ಮ ವಾದಗಳನ್ನು ಮಂಡಿಸುತ್ತಾರೆ. ಕೊನೆಗೆ ಸೇವಾಲಾಲನ ಹಣೆಯ ಬರಹವನ್ನು ಪರೀಕ್ಷಿಸಿದ ಪರಮಾತ್ಮನು ಅವನಿಗೆ ಮದುವೆ ಎಂಬುದೇ ಸ್ಪಷ್ಟಪಡಿಸುತ್ತಾನೆ. ಇದರಿಂದ ಇನ್ನಷ್ಟು ಅವಮಾನಿತಳಾದ ಮರಿಯಮ್ಮ ಇನ್ನು ತನಗೆ ಉಳಿಗಾಲ ಇಲ್ಲವೆಂದು, ಲಂಬಾಣಿ ಸಮುದಾಯದಲ್ಲಿ ತನ್ನ ಅಸ್ತಿತ್ವವೇ ಇಲ್ಲದಂತಾಗುವುದೆಂದು ಯೋಚಿಸಿ ಸೇವಾನಿಗಿಂತ ಮೊದಲೇ ಭೂಲೋಕಕ್ಕೆ ಇಳಿದು ಬಂದು ಮಾರುವೇಷದಲ್ಲಿ ನೇರವಾಗಿ ತಾಯಿ ಧರ್ಮಿಣಿ ಬಾಯಿ ಬಳಿಗೆ ಹೋಗುತ್ತಾಳೆ. ‘‘ನಿನ್ನ ಮಗ ಸೇವಾಲಾಲ ದೇವಸ್ಥಾನದಲ್ಲಿ ಸತ್ತು ಬಿದ್ದಿದ್ದು, ನೀನು ಇಲ್ಲಿ ನಿಶ್ಚಿಂತವಾಗಿ ಕಸೂತಿ ಹಾಕುತ್ತಿದ್ದೀಯ ?’’ ಎಂದು ಅವಳಿಗೆ ಹೇಳುತ್ತಲೇ ದು:ಖಿತಳಾದ ಧರ್ಮಿಣಿ ಬಾಯಿ ಎದ್ದು-ಬಿದ್ದು ದೇವಸ್ಥಾನಕ್ಕೆ ಬಂದು ಯಾರು ತಡೆದರೂ ಕೇಳದೇ ಮಗನ ದೇಹದ ಮೇಲೆ ರಪ್ಪನೇ ಬಿದ್ದು ಗೋಳಿಡುತ್ತಾಳೆ.

ಸೇವಾ ಭಾಯಾ ಭೂಲೋಕಕ್ಕೆ ಕಾಲಿಡುವಷ್ಟರಲ್ಲಿ ಆತನ ದೇಹಕ್ಕೆ ಮನುಷ್ಯರ ಸ್ಪರ್ಶವಾಗುತ್ತಿದ್ದಂತೆಯೇ ಆತನ ಆತ್ಮವು ಮರಳಿ ದೇಹವನ್ನು ಸೇರದೇ ಹಿಂದಿರುಗಿ ಸ್ವರ್ಗಕ್ಕೆ ಹೋಗಿಬಿಡುತ್ತದೆ. ಹೀಗೆ ಅಮರನಾದ ಸೇವಾಲಾಲರ ದೇಹಾಂತ್ಯವಾದ ಮೇಲೆ ಮಹಾರಾಷ್ಟ್ರದ ವಾಸಿಮ್ ಜಿಲ್ಲೆಯ ಅಕ್ಕೋಲ ತಾಲ್ಲೂಕಿನ ಸಮೀಪದಲ್ಲಿರುವ ಪೊಹರಾಗಢ ಎಂಬಲ್ಲಿ ಅಂತ್ಯಸಂಸ್ಕಾರ ನಡೆಯಿತು. ಈಗ ಅಲ್ಲಿ ಸೇವಾಲಾಲ್ ಮತ್ತು ಜಗನ್ಮಾತೆ ಮರಿಯಮ್ಮಳ ಬೃಹತ್ ಮಂದಿರಗಳನ್ನು ಕಟ್ಟಿದ್ದು, ಅದು ಬಂಜಾರರ ಪುಣ್ಯಕ್ಷೇತ್ರವಾಗಿದೆ. ಭಾರತದಾದ್ಯಂತ ನೆಲೆಯಾಗಿರುವ ಅಸಂಖ್ಯಾತ ಬಂಜಾರರು ಈ ತೀರ್ಥಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆದು ಪಾವನರಾಗುತ್ತಾರೆ. ಸೇವಾಲಾಲರ ಜನ್ಮಭೂಮಿ ಕರ್ನಾಟಕದ ಸೂರಗೊಂಡ ನಕೊಪ್ಪದಲ್ಲಿ ಇಂದು ಕರ್ನಾಟಕ ಸರಕಾರದ ಸುಪರ್ದಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಜರುಗಿ, ವಿಸ್ತಾರವಾದ ತೀರ್ಥಕ್ಷೇತ್ರವಾಗಿ ಪರಿಣಮಿಸಿದೆ. ಸರಕಾರ ಈಚೆಗೆ ಮತ್ತೆ 13 ಎಕರೆ ಜಮೀನನ್ನು ನೀಡಿ, ಬೃಹತ್ ಪ್ರಮಾಣದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದೆ.

ಪ್ರತಿ ವರ್ಷ ನಡೆಯುವ ಸಂತ ಸೇವಾಲಾಲನ ಜಯಂತಿಗಾಗಿ ಕರ್ನಾಟಕದ ಭಕ್ತಾದಿಗಳು ಶಬರಿಮಲೆಯ ಸ್ವಾಮಿಗಳಂತೆ ವ್ರತಾಧಾರಿಗಳಾಗಿ ಶ್ವೇತವಸ್ತ್ರಗಳನ್ನುಟ್ಟು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಯಾತ್ರೆಯಲ್ಲಿ ಪಾಲ್ಗೊಂಡು ಪುನೀತರಾಗುತ್ತಿದ್ದಾರೆ. 2018ರ ಈ ಜಯಂತಿಯನ್ನು ಕರ್ನಾಟಕ ಸರಕಾರ ಅಧಿಕೃತವಾಗಿ ರಾಜ್ಯಾದ್ಯಂತ ಆಚರಿಸಲು ಮುಂದಾಗಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಾಗರೋಪಾದಿಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇದೆ. ಸೇವಾಲಾಲರು ಯೋಗಿಯಾಗಿ, ಮಹಾಸಂತರಾಗಿ ಲೋಕಕಲ್ಯಾಣಕ್ಕಾಗಿ ದೇಶಾದ್ಯಂತ ಸಂಚರಿಸಿ, ಅವರ ಬದುಕನ್ನು ಪಾವನ ಮಾಡುತ್ತಾ, ಅವರ ಬಾಳಿಗೆ ಬೆಳಕನ್ನು ನೀಡುತ್ತಾ, ಬಡತನ, ಕಷ್ಟ-ಕಾರ್ಪಣ್ಯಗಳಿಂದ ಬಳಲುತ್ತಿದ್ದವರಿಗೆ ಸುಂದರವಾಗಿ, ಸುವಿಚಾರಗಳನ್ನು ಹೇಳುತ್ತಾ, ತಿದ್ದಿ-ತೀಡುತ್ತಾ ಕಲ್ಯಾಣ ಮಾಡಿದ್ದಾನೆ.
********************************************
ಕೃಪೆ: ಗೂಗಲ್ ಮತ್ತು ವಾಟ್ಸಪ್ ಮಾಹಿತಿ.
ಸಂಗ್ರಹ: ಆನಂದ ಶಿಕ್ಕೇರಿ  (ಸಹ ಶಿಕ್ಷಕರು) ವಿಜಯಪುರ.
********************************************

ಸೋಮವಾರ, ಮಾರ್ಚ್ 5, 2018

90ನೇ ಆಸ್ಕರ್ ಪ್ರಶಸ್ತಿ


*90ನೇ ಆಸ್ಕರ್ ಪ್ರಶಸ್ತಿ ಪ್ರದಾನ : 

ವಿಜೇತರ ಪಟ್ಟಿ*

==============≠=

*ಅಮೆರಿಕದ ಲಾಸ್ ಏಂಜೆಲಿಸ್ ನಲ್ಲಿ 05-03-2018 ರಂದು ನಡೆದ ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿ  2018 ನೇ ಸಾಲಿನ 90ನೇ ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಿ ಶೇಪ್ ಆಫ್ ವಾಟರ್ ಅತ್ಯುತ್ತಮ ನಿರ್ದೇಶನ ಸೇರಿದಂತೆ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗಳಿಸಿದೆ. ಗ್ಯುಲ್ಲೆರ್ಮೋ ಡೆಲ್ ಟೊರೊ ನಿರ್ದೇಶನದ ದಿ ಶೇಪ್ ಆಫ್ ವಾಟರ್ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗಳಿಸಿದೆ. ಇದೇ ಸಿನಿಮಾ ಗ್ಯುಲ್ಲೆರ್ಮೋಗೆ ಸರ್ವಶ್ರೇಷ್ಠ ನಿರ್ದೇಶಕ ಪ್ರಶಸ್ತಿ ದಕ್ಕಿಸಿಕೊಟ್ಟಿದೆ. ಅಲ್ಲದೆ ಉತ್ತಮ ಸಂಗೀತ ಹಾಗೂ ಶ್ರೇಷ್ಠ ಪ್ರೊಡಕ್ಷನ್ ಡಿಸೈನ್ ಈ ವಿಭಾಗಗಳಲ್ಲೂ ಎರಡು ಪ್ರಶಸ್ತಿಗಳನ್ನು ಗಳಿಸಿದೆ.*

===============

*ಪ್ರಶಸ್ತಿ ವಿಜೇತರ ಪಟ್ಟಿ :*

*ಶ್ರೇಷ್ಠ ನಟ : ಗ್ಯಾರಿ ಓಲ್ಡ್‍ಮ್ಯಾನ್ (ಚಿತ್ರ : ಡಾರ್ಕೆಸ್ಟ್ ಅವರ್ )*

* *ಶ್ರೇಷ್ಠ ನಟಿ : ಫ್ರಾನ್ಸೆಸ್ ಮ್ಯಾಕ್‍ಡೊರ್ಮಾಂಡ್ (ಚಿತ್ರ : ಮಿಸ್ಸೂರಿ)*

* *ಅತ್ಯುತ್ತಮ ಪೋಷಕ ನಟಿ :  ಅಲಿಸನ್ ಜಾನ್ನೇ (ಐ, ಟೊನ್ಯಾ )*

* *ಉತ್ತಮ ಪೋಷಕ ನಟ : ಸ್ಯಾಮ್ ರಾಕ್‍ವೆಲ್ (ಥ್ರೀ ಬಿಲ್‍ಬೋಡ್ರ್ಸ್ ಔಟ್‍ಸೈಡ್ ಎಬ್ಬಂಗ್, ಮಿಸ್ಸೂರಿ )*

* *ಉತ್ತಮ ಮೂಲ ಕಥೆ-ಗೆಟೌಟ್*

* *ಉತ್ತಮ ಚಿತ್ರಕಥೆ-ಕಾಲ್ ಮಿ ಬೈ ಯುವರ್ ನೇಮ್*

* *ಉತ್ತಮ ಅನಿಮೇಷನ್ ಸಿನಿಮಾ-ಕೋಕೋ*

* *ಉತ್ತಮ ವಿದೇಶಿ ಭಾಷೆ ಚಿತ್ರ-ಎ ಫ್ಯಾಂಟಾಸ್ಟಿಕ್ ವುಮೆನ್(ಚಿಲಿ)*

* *ಉತ್ತಮ ಮೂಲ ಗಾಯನ-ರಿಮೆಂಬರ್ ಮೀ, ಕೋಕೋ*

* *ಉತ್ತಮ ಸಾಕ್ಷ್ಯಚಿತ್ರ-ಇಕಾರಸ್*

* *ಉತ್ತಮ ಕಿರು ಸಾಕ್ಷ್ಯಾಚಿತ್ರ-ಹೆವನ್ ಇಸ್ ಎ ಟ್ರಾಫಿಕ್ ಜಾಮ್ ಆನ್ ದಿ 405*

* *ಉತ್ತಮ ಲೈವ್ ಆ್ಯಕ್ಷನ್ ಶಾರ್ಟ್-ದಿ ಸೈಲೆಂಟ್ ಚೈಲ್ಡ್*

* *ಉತ್ತಮ ಅನಿಮೇಷನ್ ಕಿರುಚಿತ್ರ-ಡಿಯರ್ ಬ್ಯಾಸ್ಕೆಟ್ ಬಾಲ್*

================

* *ಉತ್ತಮ ಚಿತ್ರ ಸಂಕಲನ, ಉತ್ತಮ ಶಬ್ಧ ಸಂಕಲನ ಮತ್ತು ಉತ್ತಮ ಶಬ್ಧ ಸಂಯೋಜನೆ-ಡನ್‍ಕ್ರಿಕ್(3 ಪ್ರಶಸ್ತಿಗಳು)*

============

* *ಉತ್ತಮ ಛಾಯಾಗ್ರಹಣ ಮತ್ತು ಉತ್ತಮ ದೃಶ್ಯ ಪರಿಣಾಮ-ಬ್ಲೇಡ್ ರನ್ನರ್.*

===============

*ಭಾರತದ ಪ್ರತಿಭಾವಂತ ನಟ ಅಲಿ ಫಜಲ್ ಹಾಗೂ ಬ್ರಿಟಿಷ್ ತಾರೆ ಜುಡಿ ಡೆಂಚ್ ಅಭಿನಯದ ವಿಕ್ಟೋರಿಯಾ ಅಂಡ್ ಅಬ್ದುಲ್ ಸಿನಿಮಾ ಅತ್ಯುತ್ತಮ ಮೇಕಪ್, ಹೇರ್‍ಸ್ಟೈಲ್ ಮತ್ತು ಕಾಸ್ಟ್ಯೂಮ್ ಡಿಸೈಸ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತಾದರೂ, ಆ ಪ್ರಶಸ್ತಿಗಳು ಡಾರ್ಕೆಸ್ಟ್ ಹವರ್ ಮತ್ತು ಫ್ಯಾಂಟಮ್ ಥ್ರೆಡ್ ಸಿನಿಮಾಗಳ ಪಾಲಾದವು.*

==============

*‘ದ ಶೇಪ್ ಆಫ್ ವಾಟರ್’ ಅತ್ಯುತ್ತಮ ಚಿತ್ರ*

##############

*‘ದ ಶೇಪ್ ಆಫ್ ವಾಟರ್’ 2018ನೇ ಸಾಲಿನ 90ನೇ ಆಸ್ಕರ್ ಪ್ರಶಸ್ತಿಯ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ಇದರ ನಿರ್ದೇಶಕರು ಗಿಲ್ಲೆರ್ಮೊ ಡೆಲ್ ಟೊರೊ ಈ ಸಾಲಿನ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಗಳಿಸಿದ್ದಾರೆ. ಈ ಚಿತ್ರದ ನಿರ್ಮಾಪಕರು ಜೆ. ಮಿಲ್ಸ್ ಡೇಲ್ ಆಗಿದ್ದಾರೆ. ಅತ್ಯುತ್ತಮ ಚಿತ್ರ ಸೇರಿದಂತೆ ನಾಲ್ಕು ವಿಭಾಗಗಳಲ್ಲಿ ಶೇಪ್ ಆಫ್ ವಾಟರ್ ಪ್ರಶಸ್ತಿ ಗಳಿಸಿಕೊಂಡಿದೆ. ಶೀತಲ ಯುದ್ಧದ ಫ್ಯಾಂಟಸಿ ಚಿತ್ರವಾಗಿರುವ ದ ಶೇಪ್ ಆಫ್ ವಾಟರ್ ನಲ್ಲಿ ಸ್ಯಾಲ್ಲಿ ಹಾಕಿನ್ಸ್ ಮೂಕ ದ್ವಾರಪಾಲಕಳಾಗಿ ನಟಿಸಿದ್ದು ಈಕೆ ಸರ್ಕಾರಿ ಪ್ರಯೋಗಾಲಯದಿಂದ ವಶಪಡಿಸಿಕೊಂಡ ಜನಚರ ಪ್ರಾಣಿ ಜೊತೆ ಪ್ರೀತಿಯಲ್ಲಿ ಬೀಳುತ್ತಾಳೆ ಇದೆ ಈ ಚಿತ್ರದ ಕಥೆ.*

====================================

ಸಂಗ್ರಹ: ANAND SHIKKERI (Asst master)

 ಕೃಪೆ: ವಾಟ್ಸಪ್ ಮಾಹಿತಿ

=================================

ಅಂತರಾಷ್ಟ್ರೀಯ ಮಹಿಳಾ ದಿನ


ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಪ್ರತಿ ವರ್ಷ ಮಾರ್ಚ ೮ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.

 ಅಂತರಾಷ್ಟ್ರೀಯ ಮಹಿಳೆಯರ ದಿನ:

1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು.
ಕ್ಲಾರಾ ಜೆಟ್‌ಕಿನ್ ಈ ಸಮ್ಮೇಳನದಲ್ಲಿ ಮಾರ್ಚ್ 8ನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕೆಂದು ೧೯೧೧ರಲ್ಲಿ ನಿರ್ಣಯ ಮಂಡಿಸಿದರು. ಅಲ್ಲಿ ನೆರೆದಿದ್ದ ವಿವಿಧ ರಾಷ್ಟ್ರಗಳ ಸದಸ್ಯ ಪ್ರತಿನಿಧಿಗಳು ಸರ್ವಾನುಮತದಿಂದ ಸಮ್ಮತಿಸಿದರು. ಈ ಸಮ್ಮೇಳನದಲ್ಲಿ ಫಿನ್ಲೆಂಡ್‌ನಲ್ಲಿ ಆಗಷ್ಟೇ ಚುನಾಯಿತರಾಗಿದ್ದ ಮೂವರು ಮಹಿಳೆಯರಿದ್ದು, ಅವರು ಜೆಟ್‌ಕಿನ್‌ ಸಲಹೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಹೀಗೆ ಅಂತರರಾಷ್ಟ್ರೀಯ ಮಹಿಳಾ ದಿನವೆನ್ನುವುದು ಪ್ರತಿಭಟನೆ ಮತ್ತು ರಾಜಕೀಯ ಕ್ರಿಯಾಶೀಲತೆಯ ದಿನವಾಗಿ ಅಸ್ತಿತ್ವಕ್ಕೆ ಬಂದಿತು.
1911ರಲ್ಲಿ ಮತದಾನದ ಹಕ್ಕನ್ನು ಬೇಡಿಕೆಯಾಗಿಟ್ಟುಕೊಂಡು ಮೊದಲ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಇದಕ್ಕೂ ಮೊದಲು 1903ರಲ್ಲಿ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಹೋರಾಟ ನಡೆಸಿದ್ದ ಮಹಿಳಾ ಕಾರ್ಮಿಕ ಸಂಘಟನೆಗಳು ‘ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್’ ಸ್ಥಾಪಿಸಿ ರಾಜಕೀಯ ಮತ್ತು ಆರ್ಥಿಕ ಕಲ್ಯಾಣವನ್ನು ತಮ್ಮ ಸಂಘಟನೆಯ ಮುಖ್ಯ ಧ್ಯೇಯವನ್ನಾಗಿಸಿಕೊಂಡವು.
1908ರ ಫೆಬ್ರುವರಿ ಕೊನೆಯ ಭಾನುವಾರ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಬೃಹತ್ ಪ್ರತಿಭಟನಾ ಪ್ರದರ್ಶನಗಳು ನಡೆದಿದ್ದವು. ನಂತರ 1909ರಲ್ಲಿ ಸಿದ್ಧ ಉಡುಪುಗಳ ಕಾರ್ಖಾನೆಗಳಲ್ಲಿ 20,000ದಿಂದ 30,000ದಷ್ಟು ಮಹಿಳೆಯರು ಚಳಿಗಾಲದಲ್ಲಿ 13 ವಾರಗಳ ಕಾಲ ಮುಷ್ಕರ ನಡೆಸಿ ದಸ್ತಗಿರಿಯಾದರು. ಮಹಿಳೆಯರ ಟ್ರೇಡ್ ಯೂನಿ ಯನ್ ಲೀಗ್‌ನವರು ಜಾಮೀನು ನೀಡಿ ಬಂಧಿತ ಕೆಲಸ ಗಾರರನ್ನು ಬಿಡಿಸಿಕೊಂಡರು. ಈ ಅಮೆರಿಕದ ಮಹಿಳೆಯರ ಹೋರಾಟದಿಂದ ಸ್ಫೂರ್ತಿಗೊಂಡ ಕ್ಲಾರಾ ಜೆಟ್‌ಕಿನ್ ಸೋಷಿಯಲಿಸ್ಟ್ ಮಹಿಳೆಯರ ಸಮ್ಮೇಳನದಲ್ಲಿ ವರ್ಷಕ್ಕೊಮ್ಮೆ ದಿನವನ್ನು ನಿಗದಿಪಡಿಸಿ ಮಹಿಳೆಯರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಅನುವಾಗುವಂತಹ ವ್ಯವಸ್ಥೆಗಾಗಿ ಸಲಹೆ ನೀಡಿ ಕಾರ್ಯರೂಪಕ್ಕೆ ತರಲು ಶ್ರಮಿಸಿದಳು.

ಇತಿಹಾಸ

"ಅಂತರಾಷ್ಟ್ರೀಯ ಮಹಿಳೆಯರ ದಿನ" ಮೊದಲ ಬಾರಿಗೆ ಹೊರ ಹೊಮ್ಮಿದ್ದು ಕೂಲಿ ಚಳುವಳಿ(ಲೇಬರ್ ಮೊವ್ಮೆಂಟ್ಸ್) ಚಟುವಟಿಕೆ ಉತ್ತರ ಅಮೆರಿಕಮತ್ತು ಯೂರೋಪ್ ಪ್ರದೇಶಗಳಲ್ಲಿ ನಡೆದಾಗ. ೧೯೦೯: ಸಂಯುಕ್ತ ಸಂಸ್ಥಾನಗಳಲ್ಲಿ ಮೊದಲ "ಅಂತರಾಷ್ಟ್ರೀ ಯ ಮಹಿಳೆಯರ ದಿನ"ಫೆಬ್ರವರಿ ೨೮ ರಂದು ಕಂಡು ಬಂತು. ಅಮೇರಿಕಾದ ಸಾಮಾಜವಾದಿ ಪಕ್ಷ ಈ ದಿನವನ್ನ ಕೆಲಸದ ಪರಿಸ್ಥಿತಿಯನ್ನ ವಿರೋಧಿಸಿ ನ್ಯೂಯಾರ್ಕ್ ನಗರದಲ್ಲಿ ನಡೆದ "ಸರ್ಕಾರಿ ಕಾರ್ಮಿಕರ ಚಳುವಳಿ" ಯಲ್ಲಿ ಪ್ರತಿಭಟಿಸಿದ ಮಹಿಳೆಯರಿಗೆ ಅರ್ಪಿಸಲಾಯಿತು.
೧೯೧೦: ಅಂತರಾಷ್ಟ್ರೀಯ ಸಮಾಜವಾದಿ ಕೊಪೆಂಹಗೆನ್‍ನಲ್ಲಿ ನಡೆದ ಚರ್ಚೆಯಲ್ಲಿ ಅದಿಷ್ಟಿತಗೊಳಿಸಲಾಯಿತು. ಈ ಪ್ರಸ್ಥಾಪವನ್ನು ಅವಿರೋಧವಾಗಿ ೧೦೦ ಮಹಿಳೆಯರು ೧೭ ದೇಶಗಳಿಂದ ಸಹಕರಿಸಿದರು. ಇದು ಫಿನ್ನಿಷ್ ಪಾರ್ಲಿಮೆಂಟ್‍ಗೆ ಆಯ್ಕೆಯಾದ ಮೊದಲ ಮೂವರು ಮಹಿಳೆಯರನ್ನೂ ಸಹ ಒಳಗೊಂಡಿತ್ತು.
೧೯೧೧: ಕೊಪೆಂಹಗೆನ್‍ನ ಮೊದಲ ಹೆಜ್ಜೆಯ ಫಲಿತಾಂಶವಾಗಿ, ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಮೊದಲ ಬಾರಿಗೆ ಮಾರ್ಚ್ ೧೯ ರಂದು ಆಸ್ಟ್ರೇಲಿಯ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಡ್ಜರ್ಲ್ಯಾಂಡ್ ದೇಶಗಳು ಗುರುತಿಸಿದವು. ಅಂದು ಒಂದು ಮಿಲಿಯನ್‍ಗಿಂತಲು ಹೆಚ್ಹು ಮಹಿಳೆಯರು ಹಾಗು ಪುರುಷರು ಈ ಚಳುವಳಿಯಲ್ಲಿ ಭಾಗವಹಿಸಿದರು.
ಇದಲ್ಲದೇ ಮತಚಲಾಯಿಸುವ ಹಕ್ಕು, ಸಾರ್ವಜನಿಕ ಕಛೇರಿ, ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು ಹಾಗು ಉದ್ಯೋಗ ತರಬೇತಿಯನ್ನು ಜಾರಿಗೆ ತರಲು ಬೇಡಿಕೆಯಿಟ್ಟಿದ್ದಲ್ಲದೇ ಕೆಲಸದಲ್ಲಿನ ತಾರತಮ್ಯವನ್ನ ವಿರೋಧಿಸಿ ಪ್ರತಿಭಟಿಸಿದರು. ೧೯೧೩-೧೯೧೪ : ಅಂತರಾಷ್ಟ್ರೀಯ ಮಹಿಳೆಯರ ದಿನದ ಆಚರಣೆ "೧ನೇ ವಿಶ್ವ ಯುದ್ಧ"ವನ್ನ ತಡೆಗಟ್ಟುವ ಯಾಂತ್ರಿಕ ಕೌಶಲ್ಯವಾಗಿ ಮಾರ್ಪಟ್ಟಿತು.
ಇದೇ ವೇಳೆಯಲ್ಲಿ ಶಾಂತಿ ಚಳುವಳಿಯ ಅಂಗವಾಗಿ ರಷ್ಯಾದ ಮಹಿಳೆಯರು ಫೆಬ್ರವರಿಯ ಕೊನೆಯವಾರದಲ್ಲಿ ವಿಶ್ವ ಮಹಿಳಾ ದಿನವನ್ನ ಆಚರಿಸಿ ಗಮನಸೆಳೆದರು. ಅತ್ತ ಯುರೋಪಿನಲ್ಲಿ ಅದೇ ಸಾಲಿನ ಮಾರ್ಚಿ ೮ ರಂದು ಮಹಿಳೆಯರು ಯುದ್ಧನೀತಿಯನ್ನ ವಿರೋಧಿಸಿ, ಐಕ್ಯಮತ ವನ್ನ ಸಹಕರಿಸಿ ಬ್ರುಹತ್ ಚಳುವಳಿ ನಡೆಸಿದರು.
೧೯೧೭: ಮತ್ತೆ ಯುದ್ಧ ನೀತಿಯನ್ನ ವಿರೋಧಿಸಿ ರಷ್ಯಾದ ಮಹಿಳೆಯರು ಊಟ ಮತ್ತು ಶಾಂತಿ ಚಳುವಳಿಯನ್ನ ಫೆಬ್ರವರಿ ತಿಂಗಳ ಕೊನೆಯಭಾನುವಾರದಲ್ಲಿಇದು ಗ್ರೆಗೊರಿಯನ್ ಕ್ಯಾಲೆಂಡರಿನ ಪ್ರಕಾರ ಮಾರ್ಚ ೮ ರಂದು       ನಡೆಸಿದರು. ನಾಲ್ಕು ವಾರಗಳ ನಂತರ ರಾಜ ಮನೆತನದ ಆಳ್ವಿಕೆಯನ್ನು ನಿಲ್ಲಿಸಿ ಮತಚಲಾಯಿಸುವ ಅಧಿಕಾರವನ್ನ ಸರ್ಕಾರ ನೀಡಿತು. ಅಂದಿನ ದಿನಗಳಲ್ಲಿ ಮಹಿಳಾ ದಿನಾಚರಣೆ ಮುಂದುವರೆದ ಮತ್ತು ಮುಂದುವರೆಯುತ್ತಿರುವ ದೇಶಗಳಲ್ಲಿ ಹೊಸ ಆಯಾಮವನ್ನು ಪಡೆಯಿತು. ಬೆಳೆಯುತ್ತಿದ್ದ ಅಂತರಾಷ್ಟ್ರೀಯ ಮಹಿಳಾ ಚಳುವಳಿ, ಅವುಗಳ ಸಾಮರ್ಥ್ಯವನ್ನ ಹೆಚ್ಹಿಸಿದ ನಾಲ್ಕು "ಜಾಗತಿಕ ಸಂಯುಕ್ತ ರಾಷ್ಟ್ರೀಯ ಮಹಿಳಾ ಸಮಾಲೋಚನೆ", ಮಹಿಳಾ ಹಕ್ಕು, ರಾಜಕೀಯ ಹಾಗು ಆರ್ಥಿಕ ಕ್ಷೆತ್ರಗಳಲ್ಲಿ ಭಾಗವಹಿಸುವ ಹಕ್ಕನ್ನ ಪಡೆಯಲು ಪೋಷಿಸಿದವು.
ದಿನಕಳೆದಂತೆ ಅಂತರಾಷ್ಟ್ರೀಯ ಮಹಿಳೆಯರ ದಿನ ಬೆಳವಣಿಗೆಯ ಪ್ರತಿಬಿಂಬದ ಜೊತೆಗೆ ಸಾಧರಣ ಮಹಿಳೆಯ ಧೀರತನ ಮತ್ತು ಧೃಡತೆ ದೇಶ ಹಾಗು ಸಮುದಾಯದ ಇತಿಹಾಸದಲ್ಲಿ ವಹಿಸಿದ ಅಸಾಧಾರಣ ಪಾತ್ರವನ್ನ ಬಿಂಬಿಸುತ್ತಾ ಬದಲಾವಣೆಯ ಕರೆಯನ್ನ ನೀಡುತ್ತದೆ.

ಸಂಯುಕ್ತ ರಾಷ್ರಗಳು ಮತ್ತು ಲಿಂಗ ಸಮಾನತೆ

೧೯೪೫ ರಲ್ಲಿ ಸಹಿ ಮಾಡಿದ ಸಂಯುಕ್ತ ರಾಷ್ಟ್ರಗಳ ಅಂತರಾಷ್ಟ್ರೀಯ "ಲಿಂಗ ಸಮಾನತಾ ತತ್ವ" ಅಂಗೀಕಾರಕ್ಕೆ ಬಂತು.ಅಲ್ಲಿಯ ನಂತರ ವಿಶ್ವವ್ಯಾಪ್ಯ ಒಪ್ಪಂದ ನೀತಿ, ನಿರ್ದಿಷ್ಟಮಾನ, ಮಹಿಳಾಭಿವ್ರುದ್ದಿ ಕಾರ್ಯಕ್ರಮ ಹಾಗು ಯೋಜನೆಗಳು ಕಾರ್ಯರೂಪಕ್ಕೆ ಬಂದವು. ಕೆಲ ವರ್ಷಗಳ ನಂತರ ಸಂಯುಕ್ತ ರಾಷ್ರಗಳು ಮತ್ತು ಅದರ ತಾಂತ್ರಿಕ ಏಜೆನ್ಸ್ಸಿಗಳು ಮಾನವ ಹಕ್ಕುಗಳನ್ನ ಅಭಿನಂದಿಸಿ ಮಹಿಳೆಯರು ಭಾಗವಹಿಸುವುದನ್ನು ಪ್ರೋತ್ಸಾಹಿಸಿದವು. ಮಹಿಳೆಯರನ್ನು ಪ್ರಬಲಗೊಳಿಸುವ ಸಂಯುಕ್ತ ರಾಷ್ರಗಳ ಕಾರ್ಯ ವಿಶ್ವದಾದ್ಯಂತ ಮುಂದುವರೆಯಿತು.

ಭಾರತದಲ್ಲಿ ಮಹಿಳಾ ದಿನಾಚರಣೆ

ಭಾರತದಲ್ಲಿ ಮಹಿಳಾ ದಿನಾಚರಣೆಗೆ ಸಾಮಾಜಿಕ ಅಥವಾ ರಾಜಕೀಯ ಹಿನ್ನೆಲೆ ಏನೂ ಇಲ್ಲವಾದರೂ, ಭಾರತದಲ್ಲೂ ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಸಾಧಾರಣವಾಗಿ ಗಂಡಸರು ಮಹಿಳೆಯರಿಗೆ ತಮ್ಮ ಗೌರವವನ್ನು ವ್ಯಕ್ತಪಡಿಸುತ್ತಾರೆ. ಆದರೆ ಭಾರತಕ್ಕೆ ಮಹಿಳಾ ಸಮಾನತೆ ಎಂಬುದು ಹೊಸ ಕಲ್ಪನೆಯೇನಲ್ಲ. ಅರ್ಧನಾರೀಶ್ವರ ಎಂಬ ಅದ್ಭುತ ಕಲ್ಪನೆ ಹುಟ್ಟಿದ್ದು ಭಾರತದಲ್ಲಿ. ಪ್ರಕೃತಿ ಅಥವಾ ಹೆಣ್ಣು ಹಾಗೂ ಪುರುಷ ಅಥವಾ ಗಂಡು ಒಬ್ಬರಿಂದೊಬ್ಬರು ಬೇರೆ ಅಲ್ಲ, ಸೃಷ್ಟಿಯಲ್ಲಿ ಇವರಿಬ್ಬರದು ಸಮಪಾಲು ಎಂಬುದೇ ಅರ್ಧನಾರೀಶ್ವರ ಎಂಬ ಕಲ್ಪನೆಯ ಸಂಕ್ಷಿಪ್ತ ಅರ್ಥ. ಪಶ್ಚಿಮ ರಾಷ್ಟ್ರಗಳ ಸಂಸ್ಕೃತಿಯಲ್ಲೆಲ್ಲೂ ಹೆಣ್ಣಿಗಿಲ್ಲದ ದೈವಿಕ ಪಟ್ಟವನ್ನು ಕೊಟ್ಟಿದ್ದು ಭಾರತೀಯರು. ಋಗ್ವೇದದಲ್ಲಿ ಲೋಪಾಮುದ್ರ ಹಾಗೂ ವಾಕ್ ಅಂಬ್ರಿಣಿ ಎಂಬ ಆ ಕಾಲದ ಪ್ರಬಲ ನಾರಿಯರ ಕೊಡುಗೆ ಇದೆ. ನಮ್ಮ ಗಾಯತ್ರಿ ಮಂತ್ರ ಕೂಡ ವೇದಗಳ ತಾಯಿಯೆಂದು ಕರೆಯಲ್ಪಡುವ ಗಾಯತ್ರಿಯನ್ನು ಕುರಿತಾಗಿದೆ. ವೇದಕಾಲದಲ್ಲಿ ಸಮಾಜದಲ್ಲಿ ನಾರಿಗೆ ಪುರುಷನಿಗೆ ಸಮಾನವಾದ ಹಕ್ಕುಗಳಿದ್ದವು. ಶಿಕ್ಷಣದಲ್ಲಿ ಸಮಾನತೆಯಿತ್ತು, ಆರ್ಥಿಕ ವಿಚಾರಗಳಲ್ಲಿ ಪತಿ ಪತ್ನಿಯ ಸಲಹೆ ಕೇಳುತ್ತಿದ್ದ, ಆದರೆ ಒಂದು ಹಂತದಲ್ಲಿ ಭಾರತೀಯ ಸಂಸ್ಕೃತಿ ಹೆಣ್ಣಿಗೆ ಕೊಟ್ಟ ದೈವಿಕ ಪಟ್ಟವೆ ಅವಳಿಗೆ ಮುಳುವಾಯಿತೆ ಎಂಬ ಪ್ರಶ್ನೆಯೂ ಬರುತ್ತದೆ. ನಾರಿ ಕ್ಷಮಯಾಧರಿತ್ರಿ ಹೌದು, ಆದರೆ ತನಗಾಗುವ ಎಲ್ಲ ಅನ್ಯಾಯವನ್ನೂ ಸಹಿಸಿಕೊಳ್ಳಬೇಕೆ? ತಾಳ್ಮೆ, ಕರುಣೆ ಮುಂತಾದ ನಾರಿಯ ಗುಣಗಳು ಸಮಾಜದಲ್ಲಿ ಅವಳ ಸಮಾನತೆಯನ್ನು ಪುರುಷರು ಕಸಿದುಕೊಳ್ಳಲು ಕಾರಣವಾಯಿತೆ? ಭಾರತೀಯ ಸಂಸ್ಕೃತಿಯ ಉದಾತ್ತ ತತ್ವಗಳ ಅಪಹಾಸ್ಯವೆಂಬಂತೆ ನಮ್ಮಲ್ಲಿ ಸತೀ ಪದ್ಧತಿ, ವರದಕ್ಷಿಣೆ ಮುಂತಾದ ಪಿಡುಗುಗಳು ಹುಟ್ಟಿಕೊಂಡವು. ಹೆಣ್ಣಿಗೆ ಶಿಕ್ಷಣ ಇಲ್ಲದಾಯಿತು. ಈಚೆಗೆ ಹೆಚ್ಚಾಗಿ ವರದಿಯಾಗುತ್ತಿರುವ ಅತ್ಯಾಚಾರದಂಥ ಕ್ರೂರ ಅಪರಾಧಗಳಿಗೆ ಕೂಡ ಭಾರತೀಯರು ಸಾಕ್ಷಿಯಾದರು. ಸಮಾಜದಲ್ಲಿ ಹೆಣ್ಣಿನ ಸ್ಥಾನ ಕುಸಿದಂತೆ ಹೆಣ್ಣನ್ನು ಹೆರುವುದೇ ಅಪರಾಧ ಎಂಬಂತಾಯಿತು. ಸ್ತ್ರೀ ಭ್ರೂಣ ಹತ್ಯೆ ಪ್ರಾರಂಭವಾಯಿತು. ಆದರೆ ಇದೆಲ್ಲ ಭಾರತೀಯ ಸಂಸ್ಕೃತಿಯ ದೋಷ ಎಂದುಕೊಳ್ಳುವುದು ತಪ್ಪು. ನಮ್ಮ ಸಂಸ್ಕೃತಿಯ ತತ್ವಗಳು ಪಾಲನೆಯಾಗಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ.

ಭಾರತದಲ್ಲಿ ಹೆಣ್ಣಿಗೆ ಸಮಸ್ಯೆಗಳೇನೆ ಇದ್ದರೂ, ಅವುಗಳನ್ನೆಲ್ಲ ಬಗಲಿಗಿಟ್ಟು ಮಹಿಳೆ ಎಲ್ಲ ರಂಗಗಳಲ್ಲೂ ಪುರುಷನಿಗೆ ಸಮಾನವಾಗಿ ಸಾಧನೆಗೈಯುತ್ತಿದ್ದಾಳೆ. ಭಾರತ ಹೆಣ್ಣು ಪ್ರಧಾನಿಯಾಗಿದ್ದನ್ನು, ರಾಷ್ಟ್ರಪತಿಯಾಗಿದ್ದನ್ನು ಕಂಡಿದೆ. ಅದರಿಂದ ದೇಶಕ್ಕಾದ ಒಳಿತು ಕೆಡುಕುಗಳು ಚರ್ಚಾಸ್ಪದವಾಗಿದ್ದರೂ ಕೂಡ, ಭಾರತ ಅವರಿಗೆ ಒಂದು ವೇದಿಕೆ ಒದಗಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಪ್ರಖ್ಯಾತ ಬಹುರಾಷ್ಟ್ರೀಯ ಕಂಪೆನಿಗಳ ಹಿಂದೆ ಗಂಡಿಗೆ ಸಮಾನಶಕ್ತಿಯಾಗಿ ದುಡಿದ ಮಹಿಳೆಯರಿದ್ದಾರೆ. ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿದ್ದಾಳೆ ಹೆಣ್ಣು. ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಿಂದುಳುದಿಲ್ಲ. ರಂಗಭೂಮಿ, ಸಂಗೀತ, ಕಲೆ, ಚಲನಚಿತ್ರ - ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣಿನ ಸಾಧನೆ ಮುಂದುವರೆದಿದೆ. ಮೊದಲೆಲ್ಲ ಚಲನಚಿತ್ರಗಳಲ್ಲಿ ನಟನೆಯಲ್ಲಿ ಹೆಸರು ಮಾಡುತ್ತಿದ್ದರೆ, ಈಗ ತಾಂತ್ರಿಕ ಕೆಲಸಗಳಿಗೂ ಹೆಣ್ಣು ಕೈ ಹಾಕಿ ಯಶಸ್ವಿಯಾಗಿದ್ದಾಳೆ. ಹೆಸರುಗಳು ಅನಗತ್ಯ, ಈ ಸಾಲುಗಳನ್ನು ಓದುತ್ತಿದ್ದಂತೆ ನಿಮ್ಮ ಮನದಲ್ಲಿ ಆ ಹೆಸರುಗಳು ಬಂದೇ ಬರುತ್ತವೆ. 

ಸಾಧನೆಯ ಹಾದಿಯಲ್ಲಿ ಕೆಲವು ಮಹಿಳೆಯರು ಮುಂದುವರೆದಿದ್ದರೆ, ಸಮಾನತೆ ಎಂಬ ಪದವನ್ನು ತಪ್ಪಾಗಿ ಅರ್ಥ ಮಾಡಿಕೊಂಡವರೂ ನಮ್ಮಲ್ಲಿ ಸಿಗುತ್ತಾರೆ. ಹೆಚ್ಚಿದ ವಿವಾಹ ವಿಚ್ಛೇದನಗಳು, ಮುರಿದು ಬಿದ್ದ ಸಂಸಾರಗಳು ಇದಕ್ಕೆ ಉದಾಹರಣೆ. ವರದಕ್ಷಿಣೆಯ ವಿಚಾರದಲ್ಲಿ ಹೆಣ್ಣಿಗೆ ಕೊಟ್ಟ ಹಕ್ಕನ್ನು ತಪ್ಪಾಗಿ ಬಳಸಿಕೊಂಡು ಸಂಸಾರಗಳನ್ನು ಬೀದಿಗೆ ತಂದವರೂ ಇದ್ದಾರೆ. ಸಮಾನತೆ ಎಂದರೆ "ಯಾರು ಮೇಲು, ಒಂದು ಕೈ ನೋಡಿಯೇ ಬಿಡೋಣ" ಎಂಬ ಪೈಪೋಟಿಯಲ್ಲ. ಇಬ್ಬರು ಪರಸ್ಪರ ಅರಿತುಕೊಂಡು, ಒಬ್ಬರನ್ನೊಬ್ಬರು ತಿದ್ದಿಕೊಂಡು, ಒಬ್ಬರ ಕೊರತೆಯನ್ನು ಇನ್ನೊಬ್ಬರು ನೀಗಿಸುವುದು ಸಮಾನತೆ. ಒಬ್ಬರಿಗೊಬ್ಬರು ಪೂರಕವಾಗಿರಬೇಕು, ಒಬ್ಬರನ್ನು ಇನ್ನೊಬ್ಬರು ಸಂಪೂರ್ಣಗೊಳಿಸಬೇಕು - ಅರ್ಧನಾರೀಶ್ವರದ ಕಲ್ಪನೆಯೇ ಇದು. 

ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ, ಮಗಳಾಗಿ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಗಂಡು ಅವಳಿಗೆ ಸಮಾನನಲ್ಲ, ಹೆಣ್ಣೇ ಗಂಡಿಗಿಂತ ಬಲಶಾಲಿ ಎಂಬ ಮಾತು ಸುಳ್ಳಲ್ಲ. ಇದು ಸೃಷ್ಟಿ ಹೆಣ್ಣಿಗೆ ಕೊಟ್ಟ ಶಕ್ತಿ. ಹಾಗೆಯೇ ಗಂಡು ಈ ಶಕ್ತಿಯನ್ನು ಅರಿತು, ಅದರ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಈ ಮಹಿಳಾ ದಿನವು ನಮ್ಮಲ್ಲಿ ಹೆಣ್ಣಿನ ಕುರಿತ ಗೌರವಭಾವನ್ನು ಹೆಚ್ಚಿಸಲಿ. ಸಮಾನತೆಗಾಗಿ ಹೆಣ್ಣು ಹೋರಾಡುವಂತಾಗುವುದು ಬೇಡ, ಹೆಣ್ಣಿಗೆ ಭಾರತ ಸಂಸ್ಕೃತಿಯಲ್ಲಿ ಮೊದಲಿನಿಂದಲೆ ಇದ್ದ ಅವಳ ಅರ್ಹ ಸ್ಥಾನ ದೊರಕಲಿ ಎಂದು ಆಶಿಸೋಣ.

******************************************** ಸಂಗ್ರಹ: ANANAD SHIKKERI (Asst master)
ಕೃಪೆ: WEBZINE Blog, GooGle.                         *******************************************

ಭಾರತೀಯ ಸಾಮ್ರಾಜ್ಯಗಳು


ಭಾರತೀಯ ಸಾಮ್ರಾಜ್ಯಗಳು:

೧) ಮೌರ್ಯರು :

━━━━━━━━━

ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ.  ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.

* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು  :
ಸುವರ್ಣಗಿರಿ,  ಇಸಿಲ,  ತೊಸಿಲ,  ಸಂಪ.

* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
- ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ,  ಅ.ಸಿದ್ದಾಪುರ,  ಜಿ.ರಾಮೇಶ್ವರ.
- ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ,  ಪಾಲ್ಕಿಗುಂಡು,  ಕೊಪ್ಪಳ.
- ಗುಲ್ಬರ್ಗಾ ಜಿಲ್ಲೆಯ ಸನ್ನತಿ.
- ಬಳ್ಳಾರಿ ಜಿಲ್ಲೆಯ ನಿಟ್ಟೂರು,  ಉದೇಗೊಳ್ಳಂ 

೨)  ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) : 

━━━━━━━━━━━━━━━━━━━━━━━━━━━━━━━━━-
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ,  (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.  
* ಇವರ ರಾಜಧಾನಿ  :  ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ :  ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ  :  ಸಿಮುಖ. 
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ 
* ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.

೩)  ಬನವಾಸಿಯ ಕದಂಬರು (ಕ್ರಿ.ಶ 345 - 540)

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ  :ಮಯೂರವರ್ಮ (ಮಯೂರಶರ್ಮ)  (345-360)
* ಕದಂಬರ ರಾಜಧಾನಿ :  ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ) 
* ಬನವಾಸಿಗೆ ವನವಾಸಿ,  ವೈಜಯಂತಿ,  ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ :  ಸಿಂಹ.

೪)  ತಲಕಾಡಿನ ಗಂಗರು  (ಕ್ರಿ.ಶ 350- 999)

━━━━━━━━━━━━━━━━━━━━━━━━━━━━━━━━━━━━━━━━━
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು. 
* ಈ ಸಂತತಿಯ ಮೊದಲ ದೊರೆ : ದಡಿಗ (350 -400)
* ಇವರ ಮೊದಲ ರಾಜಧಾನಿ :  ಕೋಲಾರ ಬಳಿಯ ಕುವಲಾಲ
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು  :  ತಲವನಪುರ.
* ಇವರ ಮೂರನೇ ರಾಜಧಾನಿ :  ಚೆನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ) 
* ಈ ಸಂತತಿಯ ಅತ್ಯಂತ ಪ್ರಸಿದ್ಧ  ದೊರೆ : ದುರ್ವಿನೀತ (540-600)
* ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು. 

೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ  :  ಜಯಸಿಂಹ 
* ಇವರ ರಾಜಧಾನಿ  : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ) 
* ಈ ಸಂತತಿಯ ಅತ್ಯಂತ ಪ್ರಸಿದ್ಧ  ದೊರೆ :  ಇಮ್ಮಡಿ ಪುಲಕೇಶಿ (609-642) 
* ಇವರ ರಾಜ ಲಾಂಛನ  : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ :  ಚೀನಾದ ಬೌದ್ಧ ಯಾತ್ರಿಕ  ಹ್ಯೂಯನ್ ತ್ಸಾಂಗ್. 

೬) ಮಾನ್ಯಖೇಟದ ರಾಷ್ಟ್ರಕೂಟರು  (ಕ್ರಿ.ಶ 345 - 540) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ :  ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ   ದೊರೆ :ಅಮೋಘವರ್ಷ ನೃಪತುಂಗ (814-878)
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು. 

೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)

━━━━━━━━━━━━━━━━━━━━━━━━━━━━━━━━━━━━━━━━━
* ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು. 

೮) ಕಲ್ಯಾಣಿಯ ಕಲಚೂರಿಗಳು  (ಕ್ರಿ.ಶ 1156 - 1183)

━━━━━━━━━━━━━━━━━━━━━━━━━━━━━━━━━━━━━━━━━
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ  ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು. 
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. 

೯) ದ್ವಾರಸಮುದ್ರದ ಹೊಯ್ಸಳರು  (ಕ್ರಿ.ಶ 985 - 1346) : 

━━━━━━━━━━━━━━━━━━━━━━━━━━━━━━━━━━━━━━━━━
* ಈ ಸಂತತಿಯ ಮೂಲ ಪುರುಷ  : ಸಳ.
* ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152) 
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

*******************************************ಸಂಗ್ರಹ: ANAND SHIKKERI (Asst Master
*******************************************

ಶನಿವಾರ, ಮಾರ್ಚ್ 3, 2018

ವಿಶ್ವ ವನ್ಯಜೀವಿ ದಿನ

ವಿಶ್ವ ವನ್ಯಜೀವಿ ದಿನ.











    

 ಏಕೆ? ಈ ದಿನವನ್ನು ಆಚರಿಸಲಾಗುತ್ತದೆ:                        ಕಾಡುಪ್ರಾಣಿಗಳ ಬೇಟೆ ಜತೆಗೆ ಅವುಗಳ ಚರ್ಮ, ಉಗುರು, ಕೊಂಬು, ದಂತಗಳ ಮಾರಾಟ ಅಕ್ರಮವಾಗಿ ನಡೆಯುತ್ತಿದೆ. ಇದರಿಂದ ಹಲವು ವನ್ಯಜೀವಿಗಳ ಸಂತತಿ ಅಳಿವಿನಂಚಿನಲ್ಲಿವೆ. ಅರಣ್ಯ ಪ್ರದೇಶದ ಒತ್ತುವರಿ, ಮರಗಳ ಮಾರಣಹೋಮದಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳತ್ತ ಬರುತ್ತಿವೆ. ಇದರಿಂದ ಭವಿಷ್ಯದಲ್ಲಿ ಪ್ರಕೃತಿಯಲ್ಲಿ ಅಸಮತೋಲನ ಕಂಡುಬರಲಿದೆ. ಈ ಹಿನ್ನೆಲೆಯಲ್ಲಿ ವನ್ಯಜೀವಿಗಳು ಮತ್ತು ಅರಣ್ಯ ಸಂಪತ್ತಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವದಾದ್ಯಂತ ವಿಶ್ವ ವನ್ಯಜೀವಿ ದಿನವನ್ನು ಪ್ರತಿವರ್ಷ ಮಾರ್ಚ್‌ 3ರಂದು ಆಚರಿಸಲಾಗುತ್ತದೆ.


2013ರ ವಿಶ್ವಸಂಸ್ಥೆ ಸಮಾವೇಶದಲ್ಲಿ ಮಾರ್ಚ್‌ 3 ದಿನವನ್ನು ವಿಶ್ವ ವನ್ಯಜೀವಿಗಳ ದಿನವೆಂದು ಘೋಷಿಸಲಾಯಿತು. ಜಗತ್ತಿನ ಸಸ್ಯ ಹಾಗೂ ಪ್ರಾಣಿ ಪ್ರಭೇದಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ವನ್ಯಜೀವಿ ದಿನಾಚರಣೆಯ ಧ್ಯೇಯವಾಗಿದೆ ಸಿಐಟಿಇಎಸ್‌ ಒಪ್ಪಂದಕ್ಕೆ 1973 ಮಾರ್ಚ್‌ 3ರಂದು ಸಹಿ ಹಾಕಲಾಯಿತು. ಇದರ ನೆನಪಿಗಾಗಿ ಮಾರ್ಚ್‌ ರಂದು ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಸಿಐಟಿಇಎಸ್‌ ಅಂತಾರಾಷ್ಟ್ರೀಯ ಒಪ್ಪಂದವಾಗಿದ್ದು, ವಿಶ್ವದಾದ್ಯಂತ ಸಸ್ಯ ಹಾಗೂ ವನ್ಯ ಜೀವಿ ಸಂಕುಲಗಳ ಮೇಲೆ ಹಾನಿ ಆಗದಂತೆ ನಿಗಾವಹಿಸುತ್ತದೆ.

ಪ್ರತಿವರ್ಷ ಒಂದು ಧ್ಯೇಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯ 'ಬಿಗ್‌ ಕ್ಯಾಟ್ಸ್‌' . ಸಿಂಹ, ಹುಲಿ, ಲೆಪಾರ್ಡ್‌, ಜಾಗ್ವರ್‌, ಚಿರತೆ, ಸ್ನೋ ಲೆಪಾರ್ಡ್‌, ಪೂಮಾ, ಕ್ಲೌಡೆಡ್‌ ಲೆಪಾರ್ಡ್‌ ಹಾಗೂ ಇಂಥ   Ü ಜಾತಿಗೆ ಸೇರಿದ ಕಾಡು ಪ್ರಾಣಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಎಲ್ಲ ದೇಶಗಳು ಭಾಗಿಯಾಗಿದ್ದು ಅದರಲ್ಲೂ ಭಾರತ ವಿಶಿಷ್ಟವಾದ ದೇಶ. ವಿವಿಧ ಸಂಸ್ಕೃತಿ ಹಾಗೂ ಪರಂಪರೆಯನ್ನು ಇಲ್ಲಿ ಕಾಣಬಹುದು. ಈ ನೆಲದಲ್ಲಿ ಭಾಷೆ, ಉಡುಗೆ, ಆಹಾರ, ಆಚರಣೆಗಳು ಒಂದಕ್ಕಿಂತ ಒಂದು ಜಾಗಕ್ಕೆ ಎಷ್ಟೊಂದು ವ್ಯತ್ಯಾಸ! ಇದಕ್ಕೆ ಕಾರಣವೆಂದರೆ ನಮ್ಮ ದೇಶದಲ್ಲಿರುವ ವಿವಿಧ ಭೂಗೋಳಿಕ ಪ್ರದೇಶಗಳು.
ಆ ಪ್ರದೇಶಕ್ಕೆ ಅನುಗುಣವಾಗುವಂತೆ ಅವರ ಉಡುಗೆ, ಆಹಾರ ಮತ್ತು ಜೀವನ ಶೈಲಿ ಇರುತ್ತದೆ. ಇದೇ ರೀತಿ ಆಯಾ ಭೌಗೋಳಿಕ ಪ್ರದೇಶಗಳಿಗೆ ಹೊಂದುವಂತೆ ಪ್ರಾಣಿಗಳು ಕೂಡ ವಿಕಾಸಗೊಳಿಸಿಕೊಂಡಿರುತ್ತವೆ. ಇದು ಸಾವಿರಾರು ವರ್ಷಗಳ ಕ್ರಿಯೆ. ಎಷ್ಟೋ ಬಾರಿ ನಮಗೆ ಇಂತಹ ಪ್ರಾಣಿಗಳು ನಮ್ಮ ದೇಶದಲ್ಲಿವೆ ಎನ್ನುವುದೇ ಗೊತ್ತಿರುವುದಿಲ್ಲ.ಉದಾರಣೆಗೆ ಕಂದು ಬಣ್ಣದ ಕರಡಿಗಳು, ಹಿಮ ತೋಳಗಳು, ಕಾಡು ಕುದುರೆ, ಕೆಂಪು ಪಾಂಡ, ಸ್ನೋ ಲೆಪರ್ಡ್ಸ್.. ಅಮೆರಿಕ ಹಾಗೂ ಕೆನಡಾದಲ್ಲಿ ದೇಶಗಳು ಕಂದು ಬಣ್ಣದ ಕರಡಿಗಳಿಗೆ ಹೆಸರುವಾಸಿ. ಇದನ್ನು ಅವರು ಗ್ರಿಸ್ಲ್ಯ ಬೇಯರ್ಸ್ ಎಂದು ಕರೆಯುತ್ತಾರೆ. ಇಂತಹ ಕರಡಿಗಳು ನಮ್ಮ ದೇಶದಲ್ಲೂ ಇವೆ! ಪೋರ್ಚುಗಲ್, ಜರ್ಮನಿ ಹಾಗೂ ಸ್ಕಾಟ್ಲೆಂಡ್ ಕಾಡುಕುದುರೆಗಳಿಗೆ ಹೆಸರುವಾಸಿ. ಇಂತಹ ಕಾಡುಕುದುರೆಗಳನ್ನು ಅಸ್ಸಾಂ ರಾಜ್ಯದ ಸೈಕೋವಾ ನ್ಯಾಷನಲ್ ಪಾರ್ಕ್ ನಲ್ಲಿ ನಾವು ಕಾಣಬಹುದು. ಇಂತಹ ಹಲವಾರು ವಿಶೇಷ ಪ್ರಾಣಿಗಳು ನಮ್ಮ ದೇಶದಲ್ಲಿದ್ದು, ಅಳಿವಿನ ಅಂಚಿನಲ್ಲಿವೆ. ಅವುಗಳ ಸಂತತಿ ತೀವ್ರವಾಗಿ ಕಡಿಮೆ ಆಗಿವೆ.
           ಐಯುಸಿಎನ್ ಎಂಬ ವಿಶ್ವ ಸಂಸ್ಥೆಯು ಭಾಗವಾಗಿರುವ ಇಲಾಖೆಯಿಂದ ಮಾಹಿತಿ ಪಡೆದು, ವನ್ಯ ಜೀವಿಗಳ ಸಂತತಿ ಯಾವ ಪ್ರಮಾಣದಲ್ಲಿದೆ ಎಂಬುದನ್ನು ರೆಡ್ ಡೇಟಾ ಬುಕ್ ಎಂಬ ಪುಸ್ತಕದಲ್ಲಿ ಕೊಡುತ್ತಾರೆ. ರೆಡ್ ಅಂದರೆ ಕೆಂಪು. ಕೆಂಪು ಅಪಾಯದ ಸೂಚನೆ. ಯಾವ ಜೀವಿಗಳು ಅಪಾಯದಲ್ಲಿವೆ ಎಂದು ಈ ಪುಸ್ತಕ ತಿಳಿಸುತ್ತದೆ. ಅವುಗಳ ಮುಖ್ಯ ವಿಂಗಡಣೆಗಳು ಹೀಗಿವೆ.
ಪೂರ್ತಿ ಗತಿಸಿಹೋದ ಪ್ರಾಣಿಗಳು.
                                ಯಾವ ಪ್ರಾಣಿಯ ಸಂತತಿ ಪೂರ್ತಿಯಾಗಿ ಗತಿಸಿಹೋಗಿದೆಯೋ ಅದನ್ನು "ಎಸ್ಟ್ರಿನ್ಕ್ಟ್" ಎಂದು ಕರೆಯುತ್ತಾರೆ. ನಮ್ಮ ದೇಶದಲ್ಲಿ ಇಂಡಿಯನ್ ಚೀತಾ ಪೂರ್ತಿಯಾಗಿ ಗತಿಸಿಹೋಗಿದೆ. ಬ್ರಿಟಿಷರ ಕಾಲದಲ್ಲಿ ಇವುಗಳನ್ನು ಬೇಟೆಯಾಡಲಾಗಿತ್ತು. ರಾಜಸ್ತಾನದ ಭಾಗಗಳಲ್ಲಿ ಇವುಗಳು ಹಿಂದೆ ಇದ್ದವು. ನೋಡಲು ಚಿರತೆ ರೀತಿ ಇರುತ್ತವೆ. ಆದರೆ ಗಾತ್ರ ಚಿಕ್ಕದು. ಇವುಗಳು ಅತಿ ವೇಗದ ಪ್ರಾಣಿಗಳು. ಆಫ್ರಿಕಾದಲ್ಲಿ ಮಾತ್ರ ಈಗ ನಾವು ಇವುಗಗಳನ್ನು ನೋಡಬಹುದು.  

0 ವರ್ಷದಲ್ಲಿ ಗತಿಸಿ ಹೋಗುವ ಸಂತತಿ

ಯಾವುದೇ ಪ್ರಾಣಿಗಳ ಸಂತತಿ ಪ್ರಪಂಚದಲ್ಲಿ 50ಕ್ಕೂ ಕಡಿಮೆ ಅಥವಾ 10 ವರ್ಷದಲ್ಲಿ ಶೇ 90ರಷ್ಟು ಇಳಿಕೆ ಆಗಿದ್ದಲ್ಲಿ ಅವುಗಳನ್ನು ಕ್ರಿಟಿಕಲಿ ಎಂಡೇಂಜರ್ಡ್ ಎಂದು ಕರೆಯಲಾಗುತ್ತದೆ. ಅವುಗಳು ಗತಿಸಿ ಹೋಗುವ ಸಾಧ್ಯತೆ ತುಂಬ ಹೆಚ್ಚಿರುತ್ತದೆ. ಅವುಗಳ ಸಂರಕ್ಷಣೆಗೆ ಮುಂದಾಗದಿದ್ದಲ್ಲಿ ಮುಂದಿನ 10 ವರ್ಷದಲ್ಲಿ ಗತಿಸಿ ಹೋಗುವ ಸಾಧ್ಯತೆ ಇರುತ್ತದೆ. ಅರುಣಾಚಲ ಪ್ರದೇಶದಲ್ಲಿನ ನಂದಪ ಹಾರುವ ಅಳಿಲುಗಳು ಈ ವಿಂಗಡಣೆಗೆ ಬರುತ್ತದೆ. ಇದನ್ನು ಆಹಾರಕ್ಕಾಗಿ ಕೊಲ್ಲಲಾಗುತ್ತಿತ್ತು. ಪ್ರಪಂಚದ ಅತಿ ಚಿಕ್ಕ ಘೇಂಡಾಮೃಗಗಳಾದ ಸುಮಾತ್ರಾನ್ ಘೇಂಡಾಮೃಗಗಳು ಬೆರಳೆಣಿಕೆ ಪ್ರಮಾಣಕ್ಕೆ ಬಂದುಬಿಟ್ಟಿವೆ. ಹಿಮಾಲಯದ ಭಾಗಗಳಲ್ಲಿ ಇವುಗಳು ಕಂಡುಬರುತ್ತವೆ. ಅಂದಹಾಗೆ ರಣಹದ್ದುಗಳು ಕೂಡ ಈಗ ಕ್ರಿಟಿಕಲಿ ಎಂಡೇಜರ್ಡ್.

ಕಾಡು ನಾಯಿಗಳು, ಹುಲಿ ಹಾಗೂ ಆನೆಗಳು ಅಳಿವಿನಂಚಿನಲ್ಲಿವೆ.

ಯಾವ ಪ್ರಾಣಿಯ ಸಂತತಿ ಪ್ರಪಂಚದಲ್ಲಿ 250ಕ್ಕೂ ಕಡಿಮೆ ಅಥವಾ 10 ವರ್ಷದಲ್ಲಿ ಶೇ 70ರಷ್ಟು ಇಳಿಕೆ ಆಗಿದ್ದಲ್ಲಿ ಅವುಗಳನ್ನು "ಎಂಡೇಂಜರ್ಡ್" ಎಂದು ಕರೆಯಲಾಗುತ್ತದೆ. ಅವುಗಳು ಗತಿಸಿ ಹೋಗುವ ಸಾಧ್ಯತೆ ಹೆಚ್ಚಿದ್ದು, ಅವುಗಳ ಬಗ್ಗೆ ಗಮನ ಕೊಡಬೇಕಾಗುತ್ತದೆ. ಕಾಡು ಕಟ್ಟೆಗಳು ಈ ಸಂತತಿಯಲ್ಲಿದ್ದು ಗುಜರಾತಿನ ರಣ್ ಆಫ್ ಕಚ್ ನ್ಯಾಷನಲ್ ಪಾರ್ಕ್ ನಲ್ಲಿ ಇವುಗಳನ್ನು ಸಂರಕ್ಷಿಸಲಾಗುತ್ತಿದೆ. ಹಿಮಾಲಯನ್ ಕಂದು ಬಣ್ಣದ ಕರಡಿಗಳು ಹಾಗೂ ಹಿಮ ತೋಳಗಳು ಕೂಡ ಅಳಿವಿನಂಚಿನ ಪ್ರಾಣಿಗಳು. ಕಾಡು ನಾಯಿಗಳು, ಹುಲಿ ಹಾಗೂ ಆನೆಗಳು ಕೂಡ ಈ ಪರಿಸ್ಥಿತಿಯಲ್ಲಿವೆ. ಘೇಂಡಾಮೃಗಗಳು ಎಂಡೇಂಜರ್ಡ್ ಆಗಿದ್ದು, ಅಸ್ಸಾಮಿನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಸಂರಕ್ಷಿಸಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಕಂಡುಬರುವ ಕಾಡೆಮ್ಮೆಗಳು


ಯಾವ ಪ್ರಾಣಿಯ ಸಂತತಿ ಪ್ರಪಂಚದಲ್ಲಿ 10 ಸಾವಿರಕ್ಕೂ ಕಡಿಮೆ ಅಥವಾ 10 ವರ್ಷದಲ್ಲಿ ಶೇ 50ರಷ್ಟು ಇಳಿಕೆ ಆಗಿದ್ದಲ್ಲಿ ಅವುಗಳನ್ನು ವಲ್ನರಬಲ್ ಎಂದು ಕರೆಯಲಾಗುತ್ತದೆ. ಹುಲ್ಲೇಕರ, ದಕ್ಷಿಣ ಭಾರತದಲ್ಲಿ ಕಂಡು ಬರುವ ಕಾಡೆಮ್ಮೆಗಳು, ನಾಲ್ಕು ಕೊಂಬಿನ ಜಿಂಕೆ, ಕಪ್ಪು ಕರಡಿ, ಕೆಂಪು ಪಾಂಡ ಇವೆಲ್ಲವೂ ಈ ವಿಂಗಡಣೆ ಅಡಿಯಲ್ಲಿ ಬರುತ್ತವೆ. ಕೆಂಪು ಪಾಂಡಗಳನ್ನು ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶಗಳಲ್ಲಿ ಕಾಣಬಹುದು. ಇವುಗಳ ಚರ್ಮಕ್ಕಾಗಿ ಕೊಲ್ಲಲಾಗುತ್ತಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ

ವನ್ಯಜೀವಿಗಳ ಸಂರಕ್ಷಣೆಗೆಂದು ಕೇಂದ್ರ ಸರಕಾರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ನು 1972ರಲ್ಲಿ ಜಾರಿ ಮಾಡಿತು. ಅದರಲ್ಲಿ 6 ಶೆಡ್ಯೂಲ್ ಗಳಿವೆ. ಯಾವ ಪ್ರಾಣಿಗಳು ಅಳಿವಿನ ಅಂಚಿನಲ್ಲಿವೆಯೋ ಅವೆಲ್ಲವನ್ನು ಶೆಡ್ಯೂಲ್ 1ರಲ್ಲಿ ತರಲಾಯಿತು. ಹುಲಿ, ಸಿಂಹ, ಘೇಂಡಾಮೃಗ, ಹುಲ್ಲೇಕರ ಇವೆಲ್ಲ ಶೆಡ್ಯೂಲ್ 1ರ ಅಡಿ ಬರುತ್ತದೆ. ಇವುಗಳನ್ನು ಕೊಂದಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿರುತ್ತದೆ. ಅಂದಹಾಗೆ ಹುಲ್ಲೇಕರವನ್ನು ಕೊಂದರೆ ಹುಲಿ ಕೊಂದಷ್ಟೇ ಗಂಭೀರವಾದ ಅಪರಾಧ.

ಅಭಯಾರಣ್ಯ, ರಾಷ್ಟ್ರೀಯ ಉದ್ಯಾನ
ಸರ್ಕಾರವು ವನ್ಯಜೀವಿಗಳ ಸಂರಕ್ಷಣೆಗೆಂದು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನಗಳನ್ನು ಮಾಡಿದೆ. ಅಭಯಾರಣ್ಯ, ರಾಷ್ಟ್ರೀಯ ಉದ್ಯಾನಗಳಿಗೆ ಇರುವ ವತ್ಯಾಸ ಏನೆಂದರೆ, ಅಭಯಾರಣ್ಯದಲ್ಲಿ ಮನುಷ್ಯರ ಯಾವುದೇ ಚಟುವಟಿಕೆಗೆ ಅನುಮತಿ ಇಲ್ಲ. ಸ್ಥಳೀಯರಿಗೂ ಕೂಡ ಇಲ್ಲಿ ನಿರ್ಬಂಧವಿರುತ್ತದೆ. ರಾಷ್ಟ್ರೀಯ ಉದ್ಯಾನಗಳಲ್ಲಿ ಸ್ಥಳೀಯರು 
ತಮ್ಮ ಚಟುವಟಿಕೆ ನಡೆಸಲು ಅನುಮತಿ ಇರುತ್ತದೆ. ಅಂದಹಾಗೆ ಸರಕಾರ ಪ್ರಾಜೆಕ್ಟ್ ಟೈಗರ್, ಪ್ರಾಜೆಕ್ಟ್ ಎಲಿಫೆಂಟ್ ಹೀಗೆ ಅನೇಕ ಯೋಜನೆಗಳನ್ನು ತಂದಿದೆ. ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಕೂಡ ವನ್ಯಜೀವಿಗಳ ಸಂರಕ್ಷಣೆಯಲ್ಲಿ ತೊಡಗಿಕೊಂಡಿವೆ.

JNAANASAMPAD

ನಳಂದ ವಿಶ್ವವಿದ್ಯಾಲಯ

ಭಾರತದ ಪುರಾತನ ಕಾಲದ ಜ್ಞಾನದ ಖನಜ  "ನಾಲಂದಾ ವಿಶ್ವವಿದ್ಯಾಲಯ"  ━━━━━━━━━━━━━━━━━━━━━━ —ತಕ್ಷಶಿಲಾ ತರುವಾಯ ಪ್ರಖ್ಯಾತಿಗೆ ಬಂದ ನಾಲಂದಾ ವಿಶ್ವ...

Current post